Select Your Language

Notifications

webdunia
webdunia
webdunia
webdunia

ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬಂಪರ್ ಆಫರ್?!

ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬಂಪರ್ ಆಫರ್?!
ಬೆಂಗಳೂರು , ಮಂಗಳವಾರ, 15 ಮೇ 2018 (14:08 IST)
ಬೆಂಗಳೂರು: ಅಧಿಕಾರ ಉಳಿಸಿಕೊಳ್ಳಲು ಕೊನೇ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ನಿವಾಸದಲ್ಲಿ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್, ಗುಲಾಂ ನಬಿ ಆಜಾದ್ ಮುಂತಾದವರು ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಯಾರಿಗೂ ಸ್ಪಷ್ಟ ಬಹುಮತ ಬಾರದೇ ಇದ್ದರೆ ಜೆಡಿಎಸ್ ಜತೆಗೆ ಮೈತ್ರಿ ಸರ್ಕಾರ ನಡೆಸಬಹುದು. ನಾವು ಬೆಂಬಲ ಕೊಡ್ತೀವಿ. ನೀವೇ ಮುಖ್ಯಮಂತ್ರಿ ಆಗಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಬಂಪರ್ ಆಫರ್ ನೀಡಲು ಕಾಂಗ್ರೆಸ್ ಮುಂದಾಗಿದೆ. ಹಾಗಾಗಿ ಬಿಜೆಪಿ ಮುನ್ನಡೆಯಲ್ಲಿದ್ದರೂ, ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಬಂದರೂ ಅಚ್ಚರಿಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರದ ವಿರುದ್ಧ ಎಂ ಬಿ ಪಾಟೀಲ್ ಗರಂ