Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ಕೈ ಕೊಟ್ಟ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ

ಕಾಂಗ್ರೆಸ್ ಗೆ ಕೈ ಕೊಟ್ಟ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ
ಕೊಪ್ಪಳ , ಬುಧವಾರ, 4 ಏಪ್ರಿಲ್ 2018 (18:20 IST)
ಕೊಪ್ಪಳದಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಕಾಂಗ್ರೆಸ್ ತೊರೆದ ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ ಹಾಗೂ ಬೆಂಬಲಿಗರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. 
ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿಕೊಂಡಿದ್ದಾರೆ. ಕೊಪ್ಪಳದ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ನಾಗಪ್ಪ ಸಾಲೋಣಿ ಅವರು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರ ಸಚಿವರಾಗಿ ಕೆಲಸ ಮಾಡಿದವರು. 
 
ಸ್ಥಳೀಯ ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಗಿ ಅವರ ನಡೆಯಿಂದ ಬೇಸತ್ತು ಪಕ್ಷ ತೊರೆದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನಾಗಪ್ಪ ಸಾಲೋಣಿ ಹಾಗೂ ಬಸವರಾಜ ಪಾಟೀಲ ಅವರ ಜೊತೆ ಹಲವು ನಾಯಕರು ಬಿಜೆಪಿ ತೆಕ್ಕೆಗೆ ಸರಿದಿದ್ದಾರೆ. ಈ ಪಕ್ಷಾಂತರ ಪರ್ವದಿಂದ ಕೊಪ್ಪಳದಲ್ಲಿ ಕಾಂಗ್ರೆಸ್ ನಾಯಕರು ಕಂಗಾಲಾಗುವಂತಾಗಿದ್ದು, ಕೈ ಪಾಳೆಯಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರ ಕಾಂಗ್ರೆಸ್ ನಲ್ಲಿ ಭಿನ್ನಮತ; ಶಾಸಕರ ಪ್ರತಿಕೃತಿ ದಹನ