Publish Date: Fri, 01 Jun 2018 (13:15 IST)
Updated Date: Fri, 01 Jun 2018 (13:18 IST)
ಬೆಂಗಳೂರು: ಸಂಪುಟ ರಚನೆ ಅಂತಿಮ ಹಂತಕ್ಕೆ ತಲುಪಿರುವ ಹಿನ್ನಲೆಯಲ್ಲಿ ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವೆ ಸಭೆ ನಡೆದಿದೆ.
ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಕೂಡಾ ಇದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಜೂನ್ 4 ಅಥವಾ 5 ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ರಾಜ್ಯಪಾಲರ ಬಳಿ ಚರ್ಚಿಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ದಿನ ನಿಗದಿ ಮಾಡಲಾಗುವುದು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.