Webdunia - Bharat's app for daily news and videos

Install App

ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್!

Webdunia
ಸೋಮವಾರ, 9 ಏಪ್ರಿಲ್ 2018 (06:39 IST)
ನವದೆಹಲಿ : ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ತೊರೆದು ಭಾನುವಾರ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.


ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ದೆಹಲಿಯಲ್ಲಿ ನಿನ್ನೆ  ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ಶಾಲು ಹೊದ್ದಿಸುವುದರ ಮೂಲಕ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್, ಸಂಸದ ಬಿ ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಅಫಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು,  ಇದೀಗ ಬಿಜೆಪಿ ಸೇರ್ಪಡೆಯಾಗಿದ್ದ ಕಾರಣ ಈ ಬಾರಿಯೂ ಕೂಡ ಅವರಿಗೆ ಪಕ್ಷದ ಟಿಕೆಟ್ ಖಚಿತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಡಿಕೆ ಶಿವಕುಮಾರ್ ಸರ್ಕಾರ 100 ದಿನದಲ್ಲಿ ಮಾಡಿದ್ದೇನು, ಇಂದು ಘೋಷಣೆ ಮಾಡಲಿರುವ ಯೋಜನೆಗಳೇನು ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮುಂದಿನ ಸುದ್ದಿ
Show comments