Webdunia - Bharat's app for daily news and videos

Install App

ಯಲ್ಲಾಪುರ ಶಾಸಕರಿಗೆ ಬಿಜೆಪಿ ಆಫರ್ ನೀಡಿದ ಅಡಿಯೋ ಬಿಡುಗಡೆ ಮಾಡಿದ ಉಗ್ರಪ್ಪ

Webdunia
ಶನಿವಾರ, 19 ಮೇ 2018 (12:22 IST)
ಬೆಂಗಳೂರು: ವಿಶ್ವಾಸ ಮತ ಯಾಚನೆ ಸಂದರ್ಭ ಬಿಜೆಪಿ ಪರ ಮತ ಚಲಾಯಿಸುವಂತೆ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಗೆ ಬಂಪರ್ ಆಫರ್ ನೀಡುವ ಬಿಜೆಪಿ ನಾಯಕರ ಮಾತುಕತೆಯ ಅಡಿಯೋ ಒಂದನ್ನು ಕಾಂಗ್ರೆಸ್ ಎಂಎಲ್ ಸಿ ವಿಎಸ್ ಉಗ್ರಪ್ಪ ಬಿಡುಗಡೆ ಮಾಡಿದ್ದಾರೆ.

ವಿಧಾನಸಭೆ ಕಲಾಪ ನಡೆಯುತ್ತಿರಬೇಕಾದರೇ, ಉಗ್ರಪ್ಪ ಬಿಜೆಪಿ ನಾಯಕರ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಶಿವರಾಮ್ ಹೆಬ್ಬಾರ್ ಪತ್ನಿಗೆ ಕರೆ ಮಾಡಿ ಬಿಜೆ ಪುಟ್ಟಸ್ವಾಮಿ ಮತ್ತು ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾತನಾಡಿದ್ದಾರೆಂಬ ಅಡಿಯೋ ಬಿಡುಗಡೆ ಮಾಡಲಾಗಿದೆ.

ಶಿವರಾಮ್ ಹೆಬ್ಬಾರ್ ಪತ್ನಿ ಬಳಿ 15 ಕೋಟಿ ರೂ. ನೀಡುವುದಾಗಿ ಮೊದಲು ಪುಟ್ಟಸ್ವಾಮಿ ಆಫರ್ ನೀಡುತ್ತಾರೆ. ಈ ಸಂದರ್ಭದಲ್ಲಿ ಶಿವರಾಮ್ ಹೆಬ್ಬಾರ್ ಪತ್ನಿ ನನ್ನ ಮಗನ ವಿರುದ್ಧ ಕೆಲವು ಕೇಸ್ ಗಳಿವೆ ಅದನ್ನು ಖುಲಾಸೆಗೊಳಿಸಬೇಕು ಎಂದು ಡಿಮ್ಯಾಂಡ್ ಮಾಡುತ್ತಾರೆ.

ಇದಕ್ಕೆ ಸಕಾರಾತ್ಮಕವಾಗಿ ಪುಟ್ಟಸ್ವಾಮಿ ಪ್ರತಿಕ್ರಿಯಿಸುತ್ತಾರೆ. ಬಳಿಕ ವಿಜಯೇಂದ್ರ ಮತ್ತೆ ಕರೆ ಮಾಡಿ ವಿಶ್ವಾಸ ಮತ ಸಂದರ್ಭ ಸಹಕರಿಸಬೇಕೆಂದು ಕೋರುತ್ತಾರೆ. ಈ ಸಂದರ್ಭದಲ್ಲಿ ವಿಜಯೇಂದ್ರ ಕೂಡಾ ಎಲ್ಲಾ ಬೇಡಿಕೆಗಳಿಗೆ ಒಪ್ಪುವ ಅಡಿಯೋ ಇದರಲ್ಲಿದೆ. ಈ ಅಡಿಯೋ ಇದೀಗ ವಿಶ್ವಾಸ ಮತ ಯಾಚನೆ ಸಂದರ್ಭ ಬಿಜೆಪಿಗೆ ದೊಡ್ಡ ಆಘಾತ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments