Webdunia - Bharat's app for daily news and videos

Install App

ಯಲ್ಲಾಪುರ ಶಾಸಕರಿಗೆ ಬಿಜೆಪಿ ಆಫರ್ ನೀಡಿದ ಅಡಿಯೋ ಬಿಡುಗಡೆ ಮಾಡಿದ ಉಗ್ರಪ್ಪ

Webdunia
ಶನಿವಾರ, 19 ಮೇ 2018 (12:22 IST)
ಬೆಂಗಳೂರು: ವಿಶ್ವಾಸ ಮತ ಯಾಚನೆ ಸಂದರ್ಭ ಬಿಜೆಪಿ ಪರ ಮತ ಚಲಾಯಿಸುವಂತೆ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಗೆ ಬಂಪರ್ ಆಫರ್ ನೀಡುವ ಬಿಜೆಪಿ ನಾಯಕರ ಮಾತುಕತೆಯ ಅಡಿಯೋ ಒಂದನ್ನು ಕಾಂಗ್ರೆಸ್ ಎಂಎಲ್ ಸಿ ವಿಎಸ್ ಉಗ್ರಪ್ಪ ಬಿಡುಗಡೆ ಮಾಡಿದ್ದಾರೆ.

ವಿಧಾನಸಭೆ ಕಲಾಪ ನಡೆಯುತ್ತಿರಬೇಕಾದರೇ, ಉಗ್ರಪ್ಪ ಬಿಜೆಪಿ ನಾಯಕರ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಶಿವರಾಮ್ ಹೆಬ್ಬಾರ್ ಪತ್ನಿಗೆ ಕರೆ ಮಾಡಿ ಬಿಜೆ ಪುಟ್ಟಸ್ವಾಮಿ ಮತ್ತು ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾತನಾಡಿದ್ದಾರೆಂಬ ಅಡಿಯೋ ಬಿಡುಗಡೆ ಮಾಡಲಾಗಿದೆ.

ಶಿವರಾಮ್ ಹೆಬ್ಬಾರ್ ಪತ್ನಿ ಬಳಿ 15 ಕೋಟಿ ರೂ. ನೀಡುವುದಾಗಿ ಮೊದಲು ಪುಟ್ಟಸ್ವಾಮಿ ಆಫರ್ ನೀಡುತ್ತಾರೆ. ಈ ಸಂದರ್ಭದಲ್ಲಿ ಶಿವರಾಮ್ ಹೆಬ್ಬಾರ್ ಪತ್ನಿ ನನ್ನ ಮಗನ ವಿರುದ್ಧ ಕೆಲವು ಕೇಸ್ ಗಳಿವೆ ಅದನ್ನು ಖುಲಾಸೆಗೊಳಿಸಬೇಕು ಎಂದು ಡಿಮ್ಯಾಂಡ್ ಮಾಡುತ್ತಾರೆ.

ಇದಕ್ಕೆ ಸಕಾರಾತ್ಮಕವಾಗಿ ಪುಟ್ಟಸ್ವಾಮಿ ಪ್ರತಿಕ್ರಿಯಿಸುತ್ತಾರೆ. ಬಳಿಕ ವಿಜಯೇಂದ್ರ ಮತ್ತೆ ಕರೆ ಮಾಡಿ ವಿಶ್ವಾಸ ಮತ ಸಂದರ್ಭ ಸಹಕರಿಸಬೇಕೆಂದು ಕೋರುತ್ತಾರೆ. ಈ ಸಂದರ್ಭದಲ್ಲಿ ವಿಜಯೇಂದ್ರ ಕೂಡಾ ಎಲ್ಲಾ ಬೇಡಿಕೆಗಳಿಗೆ ಒಪ್ಪುವ ಅಡಿಯೋ ಇದರಲ್ಲಿದೆ. ಈ ಅಡಿಯೋ ಇದೀಗ ವಿಶ್ವಾಸ ಮತ ಯಾಚನೆ ಸಂದರ್ಭ ಬಿಜೆಪಿಗೆ ದೊಡ್ಡ ಆಘಾತ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments