Select Your Language

Notifications

webdunia
webdunia
webdunia
webdunia

ವಿಧಾನಸಭೆ ಕಲಾಪಕ್ಕೆ ಮೊದಲೇ ಕಾಂಗ್ರೆಸ್ ಗೆ ಹಿನ್ನಡೆ!

ವಿಧಾನಸಭೆ ಕಲಾಪಕ್ಕೆ ಮೊದಲೇ ಕಾಂಗ್ರೆಸ್ ಗೆ ಹಿನ್ನಡೆ!
ಬೆಂಗಳೂರು , ಶನಿವಾರ, 19 ಮೇ 2018 (11:18 IST)
ಬೆಂಗಳೂರು: ವಿಶ್ವಾಸ ಮತ ಯಾಚನೆ ನಡೆಸಲು ಇಂದು ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಆರಂಭವಾಗುತ್ತಿದ್ದಂತೇ ಕಾಂಗ್ರೆಸ್ ಗೆ ಶಾಕ್ ಸಿಕ್ಕಿದೆ.

ಹಂಗಾಮಿ ಸ್ಪೀಕರ್  ಆಗಿ ಕೆಜಿ ಬೋಪಯ್ಯ  ಅವರನ್ನು ನೇಮಿಸಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಇದೀಗ ತಾನೇ ತೀರ್ಪು ನೀಡಿದ್ದು, ಸ್ಪೀಕರ್ ಆಯ್ಕೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ಗೆ ಆರಂಭದಲ್ಲೇ ಹಿನ್ನಡೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೆ.ಜಿ.ಬೋಪಯ್ಯ ನೇಮಕಾತಿ ಪ್ರಶ್ನಿಸಿದ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್