Select Your Language

Notifications

webdunia
webdunia
webdunia
webdunia

ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ : ಸುನಿಲ್ ಕುಮಾರ್

ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ : ಸುನಿಲ್ ಕುಮಾರ್
ಬೆಂಗಳೂರು , ಮಂಗಳವಾರ, 14 ಫೆಬ್ರವರಿ 2023 (07:28 IST)
ಬೆಂಗಳೂರು : ರಾಜ್ಯದ ಎಲ್ಲ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7 ಗಂಟೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ಆ ನಿಟ್ಟಿನಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಧಾನ ಮಂತ್ರಿ ಕುಸುಮ್ ಸಿ ಯೋಜನೆ ಜಾರಿಗೆ ತರಲಾಗಿದೆ.

ಈ ಯೋಜನೆ ಮೂಲಕ ಹಸಿರು ವಿದ್ಯುತ್ ಉತ್ಪಾದನೆ ಕಡೆ ಹೊರಟಿದ್ದೇವೆ. ಸೋಲಾರ್ ಫೀಡರ್ ಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸಲಾಗುತ್ತದೆ. ಇದಕ್ಕೆ ಟೆಂಡರ್ ಕರೆಯಲಾಗಿದೆ ಎಂದರು.

ನಮ್ಮ ಸರ್ಕಾರದ ಆದ್ಯತೆ ರೈತರಿಗೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಪೂರೈಕೆ ಗುರಿ ಇದೆ. ಕೆಲವೆಡೆ ಲೋಪವಾಗಿದೆ ಅದನ್ನೂ ಸರಿಪಡಿಸಲಾಗುತ್ತದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಡಚ್ ಸಂಶೋಧಕನ ಭವಿಷ್ಯ ನಿಜವಾಯ್ತ?