ಮತ್ತೆ ಕೊರೋನಾ ಆತಂಕ ! ಪಾಸಿವಿಟಿ ದರ ಏರಿಕೆ

Webdunia
ಸೋಮವಾರ, 30 ಮೇ 2022 (08:26 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳು 3 ತಿಂಗಳ ಬಳಿಕ 250 ಆಸುಪಾಸಿಗೆ ಹೆಚ್ಚಳವಾಗಿದ್ದು, ಸಕ್ರಿಯ ಸೋಂಕು ಪ್ರಕರಣಗಳು ಎರಡು ಸಾವಿರ ಗಡಿದಾಟಿವೆ.

ಭಾನುವಾರ 241 ಮಂದಿಗೆ ಸೋಂಕು ತಗುಲಿದ್ದು, 98 ಮಂದಿ ಗುಣಮುಖರಾಗಿದ್ದಾರೆ. ಸತತ 11ನೇ ದಿನ ಸೋಂಕಿತರ ಸಾವು ವರದಿಯಾಗಿಲ್ಲ. ಗುಣಮುಖರ ಸಂಖ್ಯೆ ಕುಸಿತದ ಕಾರಣ ಸಕ್ರಿಯ ಪ್ರಕರಣ ಸಂಖ್ಯೆ 2041ಕ್ಕೇರಿದೆ. ಇವರು ಈಗ ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಮನೆ ಆರೈಕೆಯಲ್ಲಿದ್ದಾರೆ.

ಸೋಂಕು ಪರೀಕ್ಷೆಗಳು 18 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ 0.95 ದಾಖಲಾಗಿದೆ. ಶನಿವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಎರಡೂವರೆ ಸಾವಿರ ಇಳಿಕೆಯಾಗಿವೆ.

ಆದರೂ, ಹೊಸ ಪ್ರಕರಣಗಳು 45 ಹೆಚ್ಚಳವಾಗಿವೆ. (ಶನಿವಾರ 196 ಪ್ರಕರಣಗಳು, ಸಾವು ಶೂನ್ಯ). ಬೆಂಗಳೂರು 232, ದಕ್ಷಿಣ ಕನ್ನಡ 4, ತುಮಕೂರು 3, ಬೆಳಗಾವಿ ಇಬ್ಬರಿಗೆ ಸೋಂಕು ತಗುಲಿದೆ. 26 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ರಣ ಬಿಸಿಲು, ಎಚ್ಚರಿಕೆ ಗಮನಿಸಿ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments