Webdunia - Bharat's app for daily news and videos

Install App

ಮತ್ತೆ ಕೊರೋನಾ ಆತಂಕ ! ಪಾಸಿವಿಟಿ ದರ ಏರಿಕೆ

Webdunia
ಸೋಮವಾರ, 30 ಮೇ 2022 (08:26 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳು 3 ತಿಂಗಳ ಬಳಿಕ 250 ಆಸುಪಾಸಿಗೆ ಹೆಚ್ಚಳವಾಗಿದ್ದು, ಸಕ್ರಿಯ ಸೋಂಕು ಪ್ರಕರಣಗಳು ಎರಡು ಸಾವಿರ ಗಡಿದಾಟಿವೆ.

ಭಾನುವಾರ 241 ಮಂದಿಗೆ ಸೋಂಕು ತಗುಲಿದ್ದು, 98 ಮಂದಿ ಗುಣಮುಖರಾಗಿದ್ದಾರೆ. ಸತತ 11ನೇ ದಿನ ಸೋಂಕಿತರ ಸಾವು ವರದಿಯಾಗಿಲ್ಲ. ಗುಣಮುಖರ ಸಂಖ್ಯೆ ಕುಸಿತದ ಕಾರಣ ಸಕ್ರಿಯ ಪ್ರಕರಣ ಸಂಖ್ಯೆ 2041ಕ್ಕೇರಿದೆ. ಇವರು ಈಗ ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಮನೆ ಆರೈಕೆಯಲ್ಲಿದ್ದಾರೆ.

ಸೋಂಕು ಪರೀಕ್ಷೆಗಳು 18 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ 0.95 ದಾಖಲಾಗಿದೆ. ಶನಿವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಎರಡೂವರೆ ಸಾವಿರ ಇಳಿಕೆಯಾಗಿವೆ.

ಆದರೂ, ಹೊಸ ಪ್ರಕರಣಗಳು 45 ಹೆಚ್ಚಳವಾಗಿವೆ. (ಶನಿವಾರ 196 ಪ್ರಕರಣಗಳು, ಸಾವು ಶೂನ್ಯ). ಬೆಂಗಳೂರು 232, ದಕ್ಷಿಣ ಕನ್ನಡ 4, ತುಮಕೂರು 3, ಬೆಳಗಾವಿ ಇಬ್ಬರಿಗೆ ಸೋಂಕು ತಗುಲಿದೆ. 26 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments