Webdunia - Bharat's app for daily news and videos

Install App

ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟ!

Webdunia
ಮಂಗಳವಾರ, 7 ಡಿಸೆಂಬರ್ 2021 (07:32 IST)
ಚಿಕ್ಕಮಗಳೂರು : ಒಂದೇ ದಿನ ಒಂದೇ ಸ್ಥಳಕ್ಕೆ ಐದು ಸಾವಿರಕ್ಕೂ ಅಧಿಕ ಪ್ರವಾಸಿಗರು. ಮೂರೇ ದಿನಕ್ಕೆ ಒಂದೇ ಶಾಲೆಯ 100ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ಪತ್ತೆ.
ಕೊರೊನಾ ಮೂರನೇ ಅಲೆ ಆರಂಭವಾಯ್ತೋ ಅಥವಾ ಪ್ರವಾಸಿಗರಿಂದಲೇ ಕೊರೊನಾ ಹರಡುತ್ತಿದ್ಯೋ ಗೊತ್ತಿಲ್ಲ. ಆದ್ರೆ ರಾಜ್ಯದ ವಿವಿಧ ಮೂಲೆಗಳಿಂದ ಬರ್ತಿರೋ ಪ್ರವಾಸಿಗರೇ ಆ ಜಿಲ್ಲೆಗೆ ಮಗ್ಗಲ ಮುಳ್ಳಾಗಿದ್ದಾರೆ. ಹೀಗಾಗಿ ಜಿಲ್ಲೆಯ ಜನ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಗ್ರಾಮದಲ್ಲಿರುವ ಜವಾಹರ್ ನವೋದಯ ವಸತಿ ಶಾಲೆಯ 93 ಮಕ್ಕಳಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಈ ಸೋಂಕು ಎಲ್ಲಿಂದ ಬಂತು ಅನ್ನೋದೇ ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.
 6 ರಿಂದ 12ನೇ ತರಗತಿವರೆಗೆ ಇರುವ ವಸತಿ ಶಾಲೆಯ ಮಕ್ಕಳು 2 ತಿಂಗಳ ಹಿಂದಷ್ಟೆ ಶಾಲೆಗೆ ಬಂದಿದ್ದು, ಹೊರಗೆ ಎಲ್ಲೂ ಹೋಗಿಲ್ಲ. ಆಟ -ಪಾಠ ಎಲ್ಲವೂ ವಸತಿ ಶಾಲೆ ಒಳಗೆ ಆಗುತ್ತಿದೆ. ಆರಂಭದಲ್ಲಿ ಇಬ್ಬರು ಶಿಕ್ಷಕರು, ಮೂವರು ಸಿಬ್ಬಂದಿಗಳಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಶಿಕ್ಷಕರು ಕೂಡ ಶಾಲೆಯಿಂದ ಹೊರಬಂದಿಲ್ಲ. ಸದ್ಯ ಜಿಲ್ಲಾಡಳಿತ ಸೋಂಕಿನ ನಿಗೂಢ ಮೂಲ ಹುಡುಕಲು ಪರದಾಡುತ್ತಿದೆ.
ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಯಲ್ಲಿರುವ 400ಕ್ಕೂ ಅಧಿಕ ಮಕ್ಕಳನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 93 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 107 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಶಾಲೆಯನ್ನೇ ಸೀಲ್ಡೌನ್ ಮಾಡಿರೋ ಜಿಲ್ಲಾಡಳಿತ ಶಾಲೆ ಆವರಣದಲ್ಲೇ ಮೂರು ಅಂಬುಲೆನ್ಸ್ ಬಿಟ್ಟಿದ್ದು, ಶಾಲೆಗೆ ದಿನಕ್ಕೆರಡು ಬಾರಿ ಸ್ಯಾನಿಟೈಸ್ ಮಾಡುತ್ತಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ಸಿಬ್ಬಂದಿ ಶಾಲೆಯಲ್ಲೇ ಮೊಕ್ಕಾಂ ಹೂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments