Webdunia - Bharat's app for daily news and videos

Install App

ಕಾಫಿನಾಡಲ್ಲಿ ಕೊರೊನಾ ಸ್ಪೋಟ!

Webdunia
ಮಂಗಳವಾರ, 11 ಜನವರಿ 2022 (06:43 IST)
ಚಿಕ್ಕಮಗಳೂರು : ಜಿಲ್ಲೆಯ ಎರಡು ವಸತಿ ಶಾಲೆಯ ಸುಮಾರು 55 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ನಗರದ ಕಲ್ಯಾಣ ನಗರದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ 17 ಮಕ್ಕಳು ಹಾಗೂ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 38 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಆದರೆ ಮಕ್ಕಳಿಗೆ ಸೋಂಕು ಹರಡಲು ಕಾರಣವೇನು ಎಂದು ಜಿಲ್ಲಾಡಳಿತ ಗೊಂದಲಕ್ಕೊಳಗಾಗಿದೆ. ಇದು 1 ರಿಂದ 7ನೇ ತರಗತಿವರೆಗಿನ ವಸತಿ ಶಾಲೆಯಾಗಿದ್ದು, ವಿಸ್ತಾರವಾದ ಆವರಣವಿದೆ. ಮಕ್ಕಳ ಆಟ-ಪಾಠ ಎಲ್ಲಾ ಒಂದೇ ಕಾಂಪೌಂಡ್ ಒಳಗೆ ನಡೆಯುತ್ತದೆ.

ಮಕ್ಕಳು ಹೊರಗೇ ಬಿಡುವುದಿಲ್ಲ. ಆದರೂ ಶಾಲೆ ಒಳಗೆ ಹೆಮ್ಮಾರಿ ಕೊರೊನಾ ಹೇಗೆ ಬಂದಿದೆ ಎನ್ನುವುದು ನಿಗೂಢವಾಗಿದ್ದು, ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ.

ಸದ್ಯಕ್ಕೆ ಶಾಲೆಯನ್ನೇ ಸೀಲ್ಡೌನ್ಗೊಳಿಸಿರುವ ಜಿಲ್ಲಾಡಳಿತ ಪ್ರತ್ಯೇಕ ಐಸೋಲೇಶನ್ ಮೂಲಕ ಮಕ್ಕಳಿಗೆ ಚಿಕಿತ್ಸೆ ಮಂದುವರೆಸಿದ್ದು, ಇಬ್ಬರು ನರ್ಸ್ ಹಾಗೂ ಓರ್ವ ವೈದ್ಯರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಶಾಲೆಗೆ ಭೇಟಿ ನೀಡಿರುವ ಶಾಸಕ ಎಂ.ಪಿ.ಕುಮಾರಸ್ವಾಮಿ ಮಕ್ಕಳ ಯೋಗಕ್ಷೇಮ ವಿಚಾರಿಸಿ ಪೋಷಕರು ಹಾಗೂ ಮಕ್ಕಳಿಗೆ ನಿಮ್ಮ ಜವಾಬ್ದಾರಿ ನಮ್ಮದ್ದು. ಯಾರೂ ಆತಂಕಕ್ಕೊಳಗಾಗಬೇಡಿ ಎಂದು ಧೈರ್ಯ ತುಂಬಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ವಿನಯ್ ನರ್ವಾಲ್ ಒಂದೂವರೆ ಗಂಟೆ ಬದುಕಿದ್ದರೂ ಸಹಾಯ ಸಿಗಲಿಲ್ಲ, ಸಹೋದರಿ ಆಕ್ರೋಶ

Pehalgam: ಸರ್ಜಿಕಲ್ ಸ್ಟ್ರೈಕ್ ಹೊರತಾಗಿ ಪಾಕಿಸ್ತಾನಕ್ಕೆ ಭಾರತ ಹೇಗೆಲ್ಲಾ ಹೊಡೆತ ನೀಡಿದೆ ನೋಡಿ

Karnataka Rains: ರಾಜ್ಯದಲ್ಲಿ ಇಂದು ಮಳೆಗೆ ಒಂದು ದಿನ ಬಿಡುವು

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

ಮುಂದಿನ ಸುದ್ದಿ
Show comments