Webdunia - Bharat's app for daily news and videos

Install App

ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ಕೊರೊನಾ ಕಣ್ಣು!

Webdunia
ಭಾನುವಾರ, 28 ನವೆಂಬರ್ 2021 (08:37 IST)
ಬೆಂಗಳೂರು : ಅಬ್ಬರಿಸಿ ಕೊಂಚ ಸುಮ್ಮನಾಗಿದ್ದ ಮಾಹಾಮಾರಿ ಕೊರೊನಾ ಈಗ ಮತ್ತೆ ಕಾಣಿಸಿಕೊಳ್ಳುತ್ತಿದೆ.
ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಅದರಲ್ಲೂ ಆನೇಕಲ್ ಸುತ್ತಮುತ್ತ ಕೊರೊನಾ ಹೆಚ್ಚಾಗುತ್ತಿದ್ದು ಅಧಿಕಾರಿಗಳಿಗೆ ಆತಂಕ ಹೆಚ್ಚಾಗಿದೆ. ಆನೇಕಲ್ ಬಳಿಯ ಮರಸೂರಿನ ನರ್ಸಿಂಗ್ ಕಾಲೇಜು ಮತ್ತು ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ ಪತ್ತೆಯಾದ ಕೇಸ್ಗಳು ಅಧಿಕಾರಿಗಳಿಗೆ ತಲೆನೋವು ತಂದಿದೆ.
ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 17 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ 34 ಪ್ರಕರಣ ಪತ್ತೆಯಾಗಿದೆ. ನೂರಾರು ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಬಾಕಿ ಇದೆ. ಆನೇಕಲ್ ತಾಲೂಕು ಸೂಕ್ಷ್ಮವಲಯ ಎಂದು ಪರಿಗಣಸಲಾಗಿದ್ದು ಕಟ್ಟುನಿಟ್ಟಾಗಿ ಕೊವಿಡ್ ನಿಯಮ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ.
-ಶಾಲೆಯಲ್ಲಿ ಕಡ್ಡಾಯವಾಗಿ ನೋಡಲ್ ಅಧಿಕಾರಿ ನೇಮಕಕ್ಕೆ ಸೂಚನೆ
-ನೋಡಲ್ ಅಧಿಕಾರಿಯಿಂದ ಕಾಲಕಾಲಕ್ಕೆ ಪರಿಶೀಲನೆ
-ದಿನದ 24 ಗಂಟೆ 7 ದಿನಗಳು ಮೆಡಿಕಲ್ ಆಫೀಸರ್ ಹಾಗೂ ಸ್ಟಾಫ್ ನರ್ಸ್ ನಿಯೋಜನೆ ಮಾಡಲು ಸೂಚನೆ
-ಆಕ್ಸಿಮೀಟರ್, ಥರ್ಮಾಮೀಟರ್ ಕಾಲಕಾಲಕ್ಕೆ ಬಳಸಲು ಸಲಹೆ
-ಸಮೀಪದ ಆರೋಗ್ಯ ಕೇಂದ್ರದ ನಿರಂತರ ಸಂಪರ್ಕದಲ್ಲಿರಲು ಸೂಚನೆ, ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಸಲಹೆ
-ಶಾಲೆಯಲ್ಲಿ ಪತ್ತೆಯಾದ ಸೋಂಕಿತರ ಸ್ಯಾಂಪಲ್ ಗಳು ಜಿನೋಮಿಕ್ ಸೀಕ್ವೆನ್ಸ್ ಗೆ ಕಳುಹಿಸಲು ಸೂಚನೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments