ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಳ..?

Webdunia
ಸೋಮವಾರ, 8 ನವೆಂಬರ್ 2021 (17:21 IST)
ಹೊಸ ದಿಲ್ಲಿ: ದೇಶಾದ್ಯಂತ ಮಿತಿ ಮೀರಿದ ವಾಯು ಮಾಲಿನ್ಯದಿಂದಾಗಿ ಮುಂದಿನ ದಿನಗಳಲ್ಲಿ ಕೋವಿಡ್ - 19 ಸೋಂಕಿತರ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
ಚಳಿಗಾಲ, ವಿಷಗಾಳಿ ಮತ್ತು ಕೊರೊನಾ ಬಾಧೆಗಳಿಂದ ದೇಶಾದ್ಯಂತ ಶ್ವಾಸಕೋಶ ಸಂಬಂಧಿತ ತೀವ್ರತರ ಸಮಸ್ಯೆಗಳು, ಅಸ್ತಮಾ ಬಾಧಿತರ ಉಸಿರಾಟಕ್ಕೆ ತೊಂದರೆಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಆತಂಕವನ್ನು ಏಮ್ಸ್ ನಿರ್ದೇಶಕ ಡಾ. ರಣ ದೀಪ್ ಗುಲೇರಿಯಾ ಅವರು ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 'ಹಲವು ಜನರಲ್ಲಿ ಅಲರ್ಜಿಯ ಕೆಮ್ಮು, ಅಸ್ತಮಾ, ಸಿಒಪಿಡಿ ಮತ್ತು ಇತರ ಶ್ವಾಸಕೋಶ ಸಂಬಂಧಿತ ಅನಾರೋಗ್ಯಗಳು ಸುಪ್ತವಾಗಿ ಇರುತ್ತವೆ. ಹೊರಗಿನ ವಾತಾವರಣದ ಪ್ರೇರಣೆ ಮೇಲೆ ಸಮಸ್ಯೆಗಳು ಉಲ್ಬಣಗೊಂಡು ಜನರನ್ನು ಬಾಧಿಸಲು ಶುರು ಮಾಡುತ್ತವೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ನೆಬುಲೈಜರ್ ಅಥವಾ ಇನ್ಹೇಲರ್ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ರೀತಿ ದುರ್ಬಲ ಶ್ವಾಸಕೋಶ ಹೊಂದಿರುವವರಿಗೆ ಕೊರೊನಾ ಸೋಂಕು ತಗುಲಿದಲ್ಲಿ ಮಾರಣಾಂತಿಕ ಆಗುವ ಅಪಾಯ ಹೆಚ್ಚಿದೆ' ಎಂದು ಗುಲೇರಿಯಾ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments