Webdunia - Bharat's app for daily news and videos

Install App

ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಳ..?

Webdunia
ಸೋಮವಾರ, 8 ನವೆಂಬರ್ 2021 (17:21 IST)
ಹೊಸ ದಿಲ್ಲಿ: ದೇಶಾದ್ಯಂತ ಮಿತಿ ಮೀರಿದ ವಾಯು ಮಾಲಿನ್ಯದಿಂದಾಗಿ ಮುಂದಿನ ದಿನಗಳಲ್ಲಿ ಕೋವಿಡ್ - 19 ಸೋಂಕಿತರ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
ಚಳಿಗಾಲ, ವಿಷಗಾಳಿ ಮತ್ತು ಕೊರೊನಾ ಬಾಧೆಗಳಿಂದ ದೇಶಾದ್ಯಂತ ಶ್ವಾಸಕೋಶ ಸಂಬಂಧಿತ ತೀವ್ರತರ ಸಮಸ್ಯೆಗಳು, ಅಸ್ತಮಾ ಬಾಧಿತರ ಉಸಿರಾಟಕ್ಕೆ ತೊಂದರೆಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಆತಂಕವನ್ನು ಏಮ್ಸ್ ನಿರ್ದೇಶಕ ಡಾ. ರಣ ದೀಪ್ ಗುಲೇರಿಯಾ ಅವರು ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 'ಹಲವು ಜನರಲ್ಲಿ ಅಲರ್ಜಿಯ ಕೆಮ್ಮು, ಅಸ್ತಮಾ, ಸಿಒಪಿಡಿ ಮತ್ತು ಇತರ ಶ್ವಾಸಕೋಶ ಸಂಬಂಧಿತ ಅನಾರೋಗ್ಯಗಳು ಸುಪ್ತವಾಗಿ ಇರುತ್ತವೆ. ಹೊರಗಿನ ವಾತಾವರಣದ ಪ್ರೇರಣೆ ಮೇಲೆ ಸಮಸ್ಯೆಗಳು ಉಲ್ಬಣಗೊಂಡು ಜನರನ್ನು ಬಾಧಿಸಲು ಶುರು ಮಾಡುತ್ತವೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ನೆಬುಲೈಜರ್ ಅಥವಾ ಇನ್ಹೇಲರ್ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ರೀತಿ ದುರ್ಬಲ ಶ್ವಾಸಕೋಶ ಹೊಂದಿರುವವರಿಗೆ ಕೊರೊನಾ ಸೋಂಕು ತಗುಲಿದಲ್ಲಿ ಮಾರಣಾಂತಿಕ ಆಗುವ ಅಪಾಯ ಹೆಚ್ಚಿದೆ' ಎಂದು ಗುಲೇರಿಯಾ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments