Webdunia - Bharat's app for daily news and videos

Install App

ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಳ..?

Webdunia
ಸೋಮವಾರ, 8 ನವೆಂಬರ್ 2021 (17:21 IST)
ಹೊಸ ದಿಲ್ಲಿ: ದೇಶಾದ್ಯಂತ ಮಿತಿ ಮೀರಿದ ವಾಯು ಮಾಲಿನ್ಯದಿಂದಾಗಿ ಮುಂದಿನ ದಿನಗಳಲ್ಲಿ ಕೋವಿಡ್ - 19 ಸೋಂಕಿತರ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
ಚಳಿಗಾಲ, ವಿಷಗಾಳಿ ಮತ್ತು ಕೊರೊನಾ ಬಾಧೆಗಳಿಂದ ದೇಶಾದ್ಯಂತ ಶ್ವಾಸಕೋಶ ಸಂಬಂಧಿತ ತೀವ್ರತರ ಸಮಸ್ಯೆಗಳು, ಅಸ್ತಮಾ ಬಾಧಿತರ ಉಸಿರಾಟಕ್ಕೆ ತೊಂದರೆಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಆತಂಕವನ್ನು ಏಮ್ಸ್ ನಿರ್ದೇಶಕ ಡಾ. ರಣ ದೀಪ್ ಗುಲೇರಿಯಾ ಅವರು ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 'ಹಲವು ಜನರಲ್ಲಿ ಅಲರ್ಜಿಯ ಕೆಮ್ಮು, ಅಸ್ತಮಾ, ಸಿಒಪಿಡಿ ಮತ್ತು ಇತರ ಶ್ವಾಸಕೋಶ ಸಂಬಂಧಿತ ಅನಾರೋಗ್ಯಗಳು ಸುಪ್ತವಾಗಿ ಇರುತ್ತವೆ. ಹೊರಗಿನ ವಾತಾವರಣದ ಪ್ರೇರಣೆ ಮೇಲೆ ಸಮಸ್ಯೆಗಳು ಉಲ್ಬಣಗೊಂಡು ಜನರನ್ನು ಬಾಧಿಸಲು ಶುರು ಮಾಡುತ್ತವೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ನೆಬುಲೈಜರ್ ಅಥವಾ ಇನ್ಹೇಲರ್ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ರೀತಿ ದುರ್ಬಲ ಶ್ವಾಸಕೋಶ ಹೊಂದಿರುವವರಿಗೆ ಕೊರೊನಾ ಸೋಂಕು ತಗುಲಿದಲ್ಲಿ ಮಾರಣಾಂತಿಕ ಆಗುವ ಅಪಾಯ ಹೆಚ್ಚಿದೆ' ಎಂದು ಗುಲೇರಿಯಾ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments