ಮತ್ತೆ ಆತಂಕ ಹುಟ್ಟಿಸಿದ ಕೊರೋನಾ!

Webdunia
ಮಂಗಳವಾರ, 26 ಏಪ್ರಿಲ್ 2022 (12:48 IST)
ನವದೆಹಲಿ : ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ 11 ವಾರ ಇಳಿಕೆ ಕಂಡ ಬಳಿಕ, ಕಳೆದ ಎರಡು ವಾರಗಳಿಂದ ರೋಗಿಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದೆ.

ಕಳೆದ ಮೂರು ದಿನಗಳಿಂದ ನಿರಂತರವಾಗಿ 2,500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಏಪ್ರಿಲ್ 18 ಮತ್ತು 24 ರ ನಡುವೆ, 15,700 ಕ್ಕೂ ಹೆಚ್ಚು ಹೊಸ ರೋಗಿಗಳು ಕಂಡುಬಂದಿದ್ದಾರೆ. ಕಳೆದ ವಾರದಿಂದ ಶೇ.95ರಷ್ಟು ಏರಿಕೆ ಕಂಡಿದೆ. ಕಳೆದ ವಾರದವರೆಗೆ ಕೇವಲ 3 ರಾಜ್ಯಗಳಲ್ಲಿದ್ದ ಕೋವಿಡ್ ಪ್ರಕರಣಗಳ ಹೆಚ್ಚಳವು ಈಗ 12 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಂಡುಬಂದಿವೆ.

ಇದಾದ ನಂತರ ಹಲವು ರಾಜ್ಯಗಳು ಮತ್ತೆ ನಿರ್ಬಂಧ ಹೇರಲು ಆರಂಭಿಸಿವೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಕಳೆದ ವಾರದವರೆಗೆ, ದೆಹಲಿ, ಹರಿಯಾಣ ಮತ್ತು ಯುಪಿಯಲ್ಲಿ ಮಾತ್ರ ಪ್ರಕರಣಗಳು ಹೆಚ್ಚಾಗುತ್ತಿದ್ದವು, ಆದರೆ ಈಗ ಕೇರಳ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಬಂಗಾಳ, ರಾಜಸ್ಥಾನ ಮತ್ತು ಪಂಜಾಬ್ ಕೂಡ ಕಳವಳ ವ್ಯಕ್ತಪಡಿಸಿವೆ.

2 ರಾಜ್ಯಗಳನ್ನು ಹೊರತುಪಡಿಸಿ, 8 ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಕಳೆದ ವಾರದಿಂದ ಶೇಕಡಾ 48 ರಷ್ಟು ಪ್ರಕರಣಗಳು ಹೆಚ್ಚಿವೆ. ಕರ್ನಾಟಕದಲ್ಲಿ ಶೇ.71, ತಮಿಳುನಾಡಿನಲ್ಲಿ ಶೇ.62, ಬಂಗಾಳದಲ್ಲಿ ಶೇ.66 ಮತ್ತು ತೆಲಂಗಾಣದಲ್ಲಿ ಶೇ.24ರಷ್ಟು ಏರಿಕೆಯಾಗಿದೆ.

ಉತ್ತರ ಭಾರತದ ಬಗ್ಗೆ ಹೇಳುವುದಾದರೆ, ಒಂದು ವಾರದಲ್ಲಿ, ರಾಜಸ್ಥಾನದಲ್ಲಿ 57 ಪ್ರತಿಶತ ಪ್ರಕರಣಗಳು ಹೆಚ್ಚಿವೆ. ಕಳೆದ ವಾರದ 56 ರಿಂದ ಪಂಜಾಬ್ನಲ್ಲಿ ರೋಗಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ.

ದೆಹಲಿ: ಸತತ ನಾಲ್ಕನೇ ದಿನವಾದ ಸೋಮವಾರವೂ ದೆಹಲಿಯಲ್ಲಿ 1000 ಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗಿವೆ. ಸೋಂಕಿನ ಪ್ರಮಾಣವೂ 6.42 ಶೇಕಡಾ ತಲುಪಿದೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಹಾಕದಿದ್ದರೆ 500 ರೂಪಾಯಿ ದಂಡ ವಿಧಿಸಲಾಗುವುದು. 18 ರಿಂದ 59 ವರ್ಷ ವಯಸ್ಸಿನವರಿಗೆ ಉಚಿತ ಬೂಸ್ಟರ್ ಡೋಸ್ ಅನ್ನು ಸಹ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments