Webdunia - Bharat's app for daily news and videos

Install App

40 ಕೋಟಿ ಭಾರತೀಯರಿಗೆ ಕೊರೋನಾ ಅಪಾಯ!

Webdunia
ಮಂಗಳವಾರ, 20 ಜುಲೈ 2021 (18:44 IST)
ನವದೆಹಲಿ(ಜು.20): ಕೊರೋನಾ ವೈರಸ್ ವಕ್ಕರಿಸಿದ ಬಳಿಕ ಸರ್ಕಾರ ಹಲವು ಅಂಕಿ ಅಂಶಗಳನ್ನು ಬಿಡುಗಡೆ ಮಾಡುತ್ತಿದೆ. ಕೊರೋನಾ ಸೋಂಕಿತರ ಸಂಖ್ಯೆ, ಗುಣಮುಖರ ಸಂಖ್ಯೆ, ಸಾವಿನ ಸಂಖ್ಯೆ ಮಾಹಿತಿಗಳು ಲಭ್ಯವಿದೆ. ಇದೀಗ ಸೆರೋ ಸಮೀಕ್ಷೆಯಲ್ಲಿ ಮತ್ತೊಂದು ಮಾಹಿತಿ ಬಯಲಾಗಿದೆ. ಭಾರತದಲ್ಲಿ ಬರೋಬ್ಬರಿ 40 ಕೋಟಿ ಮಂದಿ ಕೊರೋನಾ ಅಪಾಯದಲ್ಲಿದ್ದಾರೆ ಎಂದಿದೆ.

•sero ಸಮೀಕ್ಷೆ ತೆರೆದಿಟ್ಟಿದೆ ಭಾರತದ ಅಸಲಿ ಕೊರೋನಾ ಕತೆ
•ಮೂರನೇ ಎರಡರಷ್ಟ ಜನರಿಗೆ ಅಂಟಿಕೊಂಡಿದೆ ಕೊರೋನಾ ವೈರಸ್ಗೆ
•ಬರೋಬ್ಬರಿ 40 ಕೋಟಿ ಮಂದಿಗೆ ಕೊರೋನಾ ಅಪಾಯ ಇದೆ

ಈ ಸಮೀಕ್ಷಾ ವರದಿ ಪ್ರಕಾರ ಭಾರತದಲ್ಲಿ ಇನ್ನೂ 40 ಕೋಟಿ ಜಜನ ಕೊರೋನಾ ಸೋಂಕಿನ ಅಪಾಯದಲ್ಲಿದ್ದಾರೆ ಎಂದಿದೆ. ಇದೇ ಅಧ್ಯಯನ ವರದಿ ಮತ್ತೊಂದು ಮಾಹಿತಿಯನ್ನು ಬಹಿರಂಗ ಪಡಿಸಿದೆ. ಭಾರತ ಶೇಕಡಾ 67.6% ಮಂದಿಯಲ್ಲಿ ಕೊರೋನಾ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು ಅಭಿವೃದ್ಧಿಯಾಗಿದೆ ಎಂದಿದೆ.
ಈ ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಎಚ್ಚರಿಕೆ ಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ. 2ನೇ ಅಲೆ ತಗ್ಗಿದರೂ ಅಪಾಯ ಕಡಿಮೆಯಾಗಿಲ್ಲ ಎಂದಿದ್ದಾರೆ.
seಡಿo ಸಮೀಕ್ಷೆ ಜೂನ್ ಹಾಗೂ ಜುಲೈ ತಿಂಗಳಲ್ಲಿ ನಡೆಸಲಾಗಿದೆ. 21 ರಾಜ್ಯಗಳ 70 ಜಿಲ್ಲೆಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. 7,252 ಆರೋಗ್ಯ ಕಾರ್ಯಕರ್ತರು ಸೇರಿದಂತೆ 36,227 ಜನರ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಆರು ವರ್ಷಕ್ಕಿಂತ ಮೇಲ್ಪಟ್ಟ 67.6 ರಷ್ಟು ಭಾರತೀಯರು ಕೊರೋನಾ ಪ್ರತಿಕಾಯಗಳನ್ನು ಹೊಂದಿದ್ದಾರೆಂದು ವರದಿ ಹೇಳಿದೆ.
6 ರಿಂದ 17 ವರ್ಷದೊಳಗಿನ  ಮಕ್ಕಳ ಪೈಕಿ ಶೇಕಡಾ 50ಕ್ಕಿಂತ ಹೆಚ್ಚಿನ ಮಕ್ಕಳ ದೇಹದಲ್ಲಿ ಕೋವಿಡ್ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳನ್ನು ಹೊಂದಿದ್ದಾರೆ. ಆರೋಗ್ಯ ಕಾರ್ಯಕರ್ತರಲ್ಲಿ ಕೊರೋನಾ ವಿರುದ್ದ ಹೋರಾಡಬಲ್ಲ ಆ್ಯಂಟಿ ಬಾಡಿ ಶೇಕಡಾ 85ರಷ್ಟಿದೆ ಎಂದು ವರದಿ ಹೇಳುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments