Webdunia - Bharat's app for daily news and videos

Install App

ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಸಾಹಸಕ್ಕೆ ಕ್ಷಣಗಣನೆ

Webdunia
ಗುರುವಾರ, 12 ಆಗಸ್ಟ್ 2021 (09:31 IST)
ಶ್ರೀಹರಿಕೋಟ( ಆ. 12)  ಭಾರತವೂ ಬಾಹ್ಯಾಕಾಶ ಜಗತ್ತಿನಲ್ಲಿ ಮತ್ತೊಂದು ಸಾಧನೆ ಮಾಡಲು ಮುಂದಾಗಿದೆ.  ಭಾರತವು ತನ್ನ ಅತ್ಯಾಧುನಿಕ ಜಿಯೋ-ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ-ಎಫ್ 10/ಇಒಎಸ್-03ಯನ್ನು  ಆ. 12 ಗುರುವಾರ ಬೆಳಗ್ಗೆ 5.43 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಉಡಾಯಿಸಲಿದೆ.

ಹತ್ತು ವರ್ಷಕಾಲ ಕಕ್ಷೆಯಲ್ಲಿ ಉಪಗ್ರಹ ಸುತ್ತಲಿದೆ.  ರಿಯಲ್ ಟೈಮ್ ಇಮೇಜ್ ಗಳನ್ನು ಕಳಿಸಿಕೊಡುವ ಉದ್ದೇಶದಿಂದ ಉಡಾವಣೆ ಮಾಡಲಾಗುತ್ತಿದೆ.  ಇದಲ್ಲದೆ ಭೂಮಿಯ ಮೇಲೆ ನೈಸರ್ಗಿಕ ಅವಘಡಗಳು ಸಂಭವಿಸಬಹುದಾದ ಸಂದರ್ಭದಲ್ಲಿ ಮುನ್ನೆಚ್ಚರಿಕೆ..ನೀರಿನ ಮೂಲ, ಅರಣ್ಯ  ಈ  ರೀತಿ  ಹಲವು ಅಂಶಗಳನ್ನು ಹೊಸ ಉಪಗ್ರಹ ಮಾನಿಟರ್ ಮಾಡಲಿದೆ.
ಇಒಎಸ್-03 ಉಪಗ್ರಹವನ್ನು ಜಿಎಸ್ ಎಲ್ ವಿ-ಎಫ್-10ನ್ನು ಹೊತ್ತೊಯ್ಯಲಿದೆ ಎಂದು ಇಸ್ರೊ ತಿಳಿಸಿದೆ. 2 ಸಾವಿರದ 268 ಕೆಜಿ ತೂಕದ ಜಿಎಸ್ ಎಲ್ ವಿ-ಎಫ್ 10 ಇಒಎಸ್ -3, ಜಿಯೋ-ಉಪಗ್ರಹಗಳ ಹೊಸ ಸರಣಿಯ ಭಾಗವಾಗಿದೆ, ಇದು ನಾಗರಿಕ ಮತ್ತು ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಇಸ್ರೋದ ಜಿಎಸ್ಎಲ್ವಿ-ಎಫ್ 10 ರಾಕೆಟ್ ಮೂಲಕ ಕಕ್ಷೆಗೆ ಸೇರಿಸಲಿದೆ.
ಕಳೆದ ಫೆಬ್ರವರಿ 28 ರಂದು, ಇಸ್ರೋ 18 ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಬ್ರೆಜಿಲ್ನ ಅಮೆಜೋನಿಯಾ -1 ಉಪಗ್ರಹ ಮತ್ತು ಕೆಲವು ದೇಸಿ ಉಪಗ್ರಹಗಳು ಇದ್ದವು. ಕೊರೋನಾ ನಂತರದ ಕಾಲದಲ್ಲಿ ಬಾಹ್ಯಾಕಾಶ ಚಟುವಟಿಕೆಗಳು ಬಂದ್ ಆಗಿದ್ದವು .
ವಾಸ್ತವದಲ್ಲಿ 2,268 ಕೆಜಿ ತೂಕದ ಜಿಸಾಟ್ -1 ಉಪಗ್ರಹವನ್ನು ಕಳೆದ ವರ್ಷ ಮಾರ್ಚ್ 5ರಂದೇ ಕಕ್ಷೆಗೆ ಕಳುಹಿಸಬೇಕಿತ್ತು. ಆದರೆ, ಕೆಲವು ತಾಂತ್ರಿಕ ಕಾರಣಗಳಿಂದಾಗಿ ಉಪಗ್ರಹ ಉಡಾವಣೆಯನ್ನು ಮುಂದಕ್ಕೆ ಹಾಕಲಾಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments