Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಹೇರಿಕೆಗೆ ಕ್ಷಣಗಣನೆ..!

Webdunia
ಮಂಗಳವಾರ, 28 ಡಿಸೆಂಬರ್ 2021 (14:08 IST)
ಬೆಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ಮಂಗಳವಾರ ರಾತ್ರಿಯಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.

ಇದು ಹೋಟೆಲ್, ವ್ಯಾಪಾರ, ಸಾರಿಗೆ ಸೇರಿದಂತೆ ಹಲವು ವಲಯಗಳ ಮೇಲೆ ಭಾರಿ ಹೊಡೆತ ನೀಡಲಿದ್ದು, ಹೀಗಾಗಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಜತೆಗೆ ನಿರ್ಬಂಧಗಳ ಸಡಿಲಿಕೆಗೆ ಒತ್ತಡ ಹೆಚ್ಚಾಗಿದೆ.

ಎರಡು ಬಾರಿಯ ಲಾಕ್ಡೌನ್, ಹಲವು ಬಾರಿ ಎದುರಾದ ನೈಟ್ ಕರ್ಫ್ಯೂಗಳಿಂದ ಈಗಾಗಲೇ ಭಾರಿ ಸಂಕಷ್ಟದಲ್ಲಿರುವ ಆತಿಥ್ಯ, ಉದ್ಯಮ ಕ್ಷೇತ್ರಗಳು ಒಂದಿಷ್ಟು ಚೇತರಿಕೆ ಕಾಣುತ್ತಿವೆ. ಈ ಬಾರಿಯ ಹೊಸ ವರ್ಷಾಚರಣೆಯ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದವು.

ರಾಜ್ಯ ಸರಕಾರ ಡಿಸೆಂಬರ್ 28ರಿಂದ ಜನವರಿ 7 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಿದ್ದರೆ, ಡಿಸೆಂಬರ್ 30 ರಿಂದ ಜನವರಿ 4ರವರೆಗೆ ಹೋಟೆಲ್, ಪಬ್, ಬಾರ್ಗಳಲ್ಲಿ ಶೇ. 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ.

ಸಭೆ ಸಮಾರಂಭ, ರಾಜಕೀಯ ಸಮಾವೇಶ, ಸಿನಿಮಾ ಮಂದಿರ, ಸಾರ್ವಜನಿಕ ಸಾರಿಗೆಯಲ್ಲಿ ಯಾವುದೇ ನಿರ್ಬಂಧವಿಲ್ಲ. ಕೇವಲ ಕೆಲವೇ ಉದ್ಯಮಗಳನ್ನು ಮಾತ್ರ ಗುರಿಯಾಗಿಸಿಕೊಂಡು ನಿಷೇಧಾಜ್ಞೆ ಹೇರುವುದು ಎಷ್ಟು ಸರಿ ಎಂದು ಉದ್ಯಮಿಗಳು ಸರಕಾರವನ್ನು ಪ್ರಶ್ನಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments