Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಹೇರಿಕೆಗೆ ಕ್ಷಣಗಣನೆ..!

Webdunia
ಮಂಗಳವಾರ, 28 ಡಿಸೆಂಬರ್ 2021 (14:08 IST)
ಬೆಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ಮಂಗಳವಾರ ರಾತ್ರಿಯಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.

ಇದು ಹೋಟೆಲ್, ವ್ಯಾಪಾರ, ಸಾರಿಗೆ ಸೇರಿದಂತೆ ಹಲವು ವಲಯಗಳ ಮೇಲೆ ಭಾರಿ ಹೊಡೆತ ನೀಡಲಿದ್ದು, ಹೀಗಾಗಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಜತೆಗೆ ನಿರ್ಬಂಧಗಳ ಸಡಿಲಿಕೆಗೆ ಒತ್ತಡ ಹೆಚ್ಚಾಗಿದೆ.

ಎರಡು ಬಾರಿಯ ಲಾಕ್ಡೌನ್, ಹಲವು ಬಾರಿ ಎದುರಾದ ನೈಟ್ ಕರ್ಫ್ಯೂಗಳಿಂದ ಈಗಾಗಲೇ ಭಾರಿ ಸಂಕಷ್ಟದಲ್ಲಿರುವ ಆತಿಥ್ಯ, ಉದ್ಯಮ ಕ್ಷೇತ್ರಗಳು ಒಂದಿಷ್ಟು ಚೇತರಿಕೆ ಕಾಣುತ್ತಿವೆ. ಈ ಬಾರಿಯ ಹೊಸ ವರ್ಷಾಚರಣೆಯ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದವು.

ರಾಜ್ಯ ಸರಕಾರ ಡಿಸೆಂಬರ್ 28ರಿಂದ ಜನವರಿ 7 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಿದ್ದರೆ, ಡಿಸೆಂಬರ್ 30 ರಿಂದ ಜನವರಿ 4ರವರೆಗೆ ಹೋಟೆಲ್, ಪಬ್, ಬಾರ್ಗಳಲ್ಲಿ ಶೇ. 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ.

ಸಭೆ ಸಮಾರಂಭ, ರಾಜಕೀಯ ಸಮಾವೇಶ, ಸಿನಿಮಾ ಮಂದಿರ, ಸಾರ್ವಜನಿಕ ಸಾರಿಗೆಯಲ್ಲಿ ಯಾವುದೇ ನಿರ್ಬಂಧವಿಲ್ಲ. ಕೇವಲ ಕೆಲವೇ ಉದ್ಯಮಗಳನ್ನು ಮಾತ್ರ ಗುರಿಯಾಗಿಸಿಕೊಂಡು ನಿಷೇಧಾಜ್ಞೆ ಹೇರುವುದು ಎಷ್ಟು ಸರಿ ಎಂದು ಉದ್ಯಮಿಗಳು ಸರಕಾರವನ್ನು ಪ್ರಶ್ನಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments