Publish Date: Sat, 23 Apr 2022 (07:04 IST)
Updated Date: Sat, 23 Apr 2022 (07:17 IST)
ಕಲಬುರಗಿ: ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೇ 9 ರಿಂದ ಶ್ರೀರಾಮ ಸೇನೆ ಆಜಾನ್ ಸೇ ಆಜಾದಿ ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆ ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರುವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದೆ ಎಂದರು.
ಯಾವ ಯಾವ ಸಂದರ್ಭದಲ್ಲಿ ಎಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಡಿಜಿ ಅವರು ಕೂಡ ಸಕ್ರ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸುವುದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೊಣ ಎಂದು ಹೇಳಿದರು.