Webdunia - Bharat's app for daily news and videos

Install App

ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ: ತಜ್ಞರ ಶಿಫಾರಸು!

Webdunia
ಶುಕ್ರವಾರ, 30 ಜುಲೈ 2021 (09:33 IST)
ನವದೆಹಲಿ(ಜು.30): ಕೇಂದ್ರೀಯ ಔಷಧ ಗುಣಮಟ್ಟನಿಯಂತ್ರಕ ಸಂಸ್ಥೆಯ (ಸಿಡಿಎಸ್ಸಿಒ) ತಜ್ಞರ ಸಮಿತಿ ಗುರುವಾರ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ಗಳ ತಲಾ 1 ಡೋಸ್ ನೀಡಿ ಜನರ ಮೇಲೆ ಪ್ರಯೋಗ ನಡೆಸಲು ಶಿಫಾರಸು ಮಾಡಿದೆ. ಇದಕ್ಕಾಗಿ ಅದು ಸರ್ಕಾರದ ಅನುಮತಿ ಕೋರಿದೆ.

* ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ: ತಜ್ಞರ ಶಿಫಾರಸು
* ಎರಡೂ ಲಸಿಕೆಗಳ ತಲಾ 1 ಡೋಸ್ ನೀಡಿಕೆ
* ವೆಲ್ಲೂರು ಮೆಡಿಕಲ್ ಕಾಲೇಜಿನಲ್ಲಿ ಇದರ ಪ್ರಯೋಗ
ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು ಎರಡೂ ಲಸಿಕೆಗಳ ಮಿಶ್ರಣ ಪ್ರಯೋಗ ಮಾಡಲು ಕೋರಿಕೆ ಸಲ್ಲಿಸಿತ್ತು. ಇದಕ್ಕೆ ಅನುಮತಿ ನೀಡಬೇಕೆಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಇದಕ್ಕೆ ಸರ್ಕಾರದ ಅನುಮತಿ ದೊರೆತರೆ ದೇಶದಲ್ಲಿ ಇಂಥ ಮೊದಲ ಪ್ರಯೋಗ ಎನ್ನಿಸಿಕೊಳ್ಳಲಿದೆ.
ಇದರರ್ಥ, ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ ತಲಾ 1 ಡೋಸ್ ಅನ್ನು ಜನರಿಗೆ ನೀಡಿ ಪ್ರಯೋಗಕ್ಕೆ ಒಳಪಡಿಸಲಾಗುತ್ತದೆ. ಇದರಿಂದ ಭಾರೀ ಪ್ರತಿಕಾಯ ಶಕ್ತಿ ಉತ್ಪಾದನೆ ಆಗಬಹುದು ಎಂಬ ಊಹೆ ಇದೆ. ಇದು ಯಶಸ್ವಿಯಾದರೆ ದೇಶದಲ್ಲಿ ಈ ರೀತತಿಯ ಲಸಿಕೆ ಮಿಶ್ರಣ ಜಾರಿಗೆ ಪದ್ಧತಿ ವ್ಯವಸ್ಥೆ ಬರಲಿದೆ.
ಈಗಾಗಲೇ ವಿದೇಶಗಳಲ್ಲಿ ಮಾಡೆರ್ನಾ ಹಾಗೂ ಆ್ಯಸ್ಟ್ರಾಜೆನೆಕಾದ ಲಸಿಕೆ ಮಿಶ್ರಣ ಪ್ರಯೋಗ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments