ಗಡಿದಾಟಿದ ಕೊರೊನಾ: ಓಮಿಕ್ರಾನ್ ಸಂಖ್ಯೆ ಏರಿಕೆ!

Webdunia
ಗುರುವಾರ, 30 ಡಿಸೆಂಬರ್ 2021 (15:14 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ನಿನ್ನೆ 566 ಹೊಸ ಪ್ರಕರಣ ಪತ್ತೆಯಾಗಿತ್ತು.

ಇಂದು ಒಟ್ಟು 707 ಕೇಸ್ ಮತ್ತು 3 ಮರಣ ಪ್ರಕರಣ ದಾಖಲಾಗಿದೆ. ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆ ಕಂಡು ಆತಂಕ ಮೂಡಿಸಿದೆ.

ಬೆಂಗಳೂರಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, 565 ಮಂದಿಗೆ ಇಂದು ಕೊರೊನಾ ಬಂದಿದೆ. ಜೊತೆಗೆ ರಾಜ್ಯದಲ್ಲಿ ದಾಖಲಾದ ಮೂರು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 252 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,223ಕ್ಕೆ ಏರಿಕೆ ಕಂಡಿದೆ.

ಈವರೆಗೆ ರಾಜ್ಯದಲ್ಲಿ ಒಟ್ಟು 30,06,505 ಮಂದಿಗೆ ಕೊರೊನಾ ಬಂದಿದೆ. 39,59,926 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.42 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.61 ರಷ್ಟಿದೆ.

ರಾಜ್ಯದಲ್ಲಿ ಇಂದು ಒಟ್ಟು 1,63,161 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,14,686 ಸ್ಯಾಂಪಲ್ (ಆರ್ಟಿಪಿಸಿಆರ್ 92,405 + 22,281 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments