Webdunia - Bharat's app for daily news and videos

Install App

ಕಾರ್ಗಿಲ್ ವಿಜಯ್ ದಿವಸ್ ಗೆ ಸೈನಿಕರನ್ನು ಸ್ಮರಿಸದ ರಾಹುಲ್ ಗಾಂಧಿ ವಿರುದ್ಧ ಟೀಕೆ

Webdunia
ಭಾನುವಾರ, 29 ಜುಲೈ 2018 (08:49 IST)
ನವದೆಹಲಿ: ಮೊನ್ನೆಯಷ್ಟೇ ಕಾರ್ಗಿಲ್ ನಲ್ಲಿ ನಮ್ಮ ಸೈನಿಕರನ್ನು ಪಾಕ್ ಪಡೆಯನ್ನು ಹೊಡೆದುರುಳಿಸಿ ವಿಜಯೋತ್ಸವ ಆಚರಿಸಿದ ವಾರ್ಷಿಕೋತ್ಸವವಿತ್ತು. ಆದರೆ ಈ ಬಗ್ಗೆ ಟ್ವೀಟ್ ಮಾಡದ ರಾಹುಲ್ ಗಾಂಧಿ ವಿರುದ್ಧ ಇದೀಗ ಟೀಕೆ ಮಾಡಲಾಗುತ್ತಿದೆ.

ಈ ಬಗ್ಗೆ ಟೀಕೆ ಮಾಡಿರುವ ಬಿಜೆಪಿ ಶಾಸಕ ಸಿಟಿ ರವಿ ‘ರಾಹುಲ್ ಗಾಂಧಿಗೆ ಪಾಕಿಸ್ತಾನದ ಬಗ್ಗೆ ಎಷ್ಟು ಪ್ರೀತಿಯಿದೆ, ಭಾರತದ ಸೈನಿಕರಿಗೆ ಬಗ್ಗೆ ಎಷ್ಟು ಧ್ವೇಷವಿದೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ. ನಮ್ಮ ಸೈನಿಕರು ಬಲಿದಾನ ಮಾಡಿ ಕಾರ್ಗಿಲ್ ನಲ್ಲಿ ವಿಜಯೋತ್ಸವ ಆಚರಿಸಿದ ಈ ದಿನದ ಬಗ್ಗೆ ಒಂದೇ ಒಂದು ಟ್ವೀಟ್ ಮಾಡಿಲ್ಲ’ ಎಂದು ಟ್ವೀಟ್ ಮುಖಾಂತರ ಟೀಕಿಸಿದ್ದಾರೆ.

ಅಷ್ಟೇ ಅಲ್ಲದೆ, ಪ್ರಧಾನ ಮಂತ್ರಿ ಹುದ್ದೆ ಮರೆತುಬಿಡಿ, ಈ ವ್ಯಕ್ತಿ ಸಂಸದರೆನಿಸಲೂ ಯೋಗ್ಯರೇ ಎಂದು ಸಿಟಿ ರವಿ ಲೇವಡಿ ಮಾಡಿದ್ದಾರೆ. ಸಿಟಿ ರವಿ ಮಾತ್ರವಲ್ಲ, ಬಿಜೆಪಿ ಸಾಮಾಜಿಕ ಜಾಲತಾಣಗಳ ಮೂಲಕ ರಾಹುಲ್ ಗಾಂಧಿಯ ಈ ನಡೆಯ ಕುರಿತು ಟೀಕೆ ಮಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments