Webdunia - Bharat's app for daily news and videos

Install App

‘ಹೇಗೆ ನಡೆದುಕೊಳ್ಳಬೇಕೆಂದು ನಾವು ಹೇಳಿಕೊಡಬೇಕಾ?’: ಸಚಿವೆ ನಿರ್ಮಲಾ ವಿರುದ್ಧ ಡಿಸಿಎಂ ಪರಂ ಗರಂ

Webdunia
ಶನಿವಾರ, 25 ಆಗಸ್ಟ್ 2018 (09:20 IST)
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಪ್ರವಾಹ ಪೀಡಿತ ಪ್ರದೇಶಗಳ ಭೇಟಿ ಸಂದರ್ಭದಲ್ಲಿ ನಡೆದುಕೊಂಡ ರೀತಿಗೆ ಡಿಸಿಎಂ ಜಿ ಪರಮೇಶ್ವರ್  ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

ಅಧಿಕಾರಿಗಳ ಜತೆ ಗರಂ ಆಗಿ ನಡೆದುಕೊಂಡ ಸಚಿವೆ ನಿರ್ಮಲಾ, ಸಚಿವರ ಜತೆ ಸಿಡಿಮಿಡಿಗೊಳ್ಳುತ್ತಲೇ ಮಾತನಾಡಿದ್ದರು. ಅಷ್ಟೇ ಅಲ್ಲದೆ, ಸಭೆಯಲ್ಲೂ ಸರಿಯಾಗಿ ಸಮಸ್ಯೆ ಆಲಿಸಿಕೊಳ್ಳಲಿಲ್ಲ ಎಂಬ ಆರೋಪಗಳ ಬಗ್ಗೆ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

‘ಅವರು ನಮ್ಮ ರಾಜ್ಯದಿಂದಲೇ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾದವರು. ಅವರಿಗೆ ಹೇಗೆ ನಡೆದುಕೊಳ್ಳಬೇಕೆಂದು ನಾವು ಹೇಳಿಕೊಡಬೇಕಾ? ತಾವೊಬ್ಬರ ರಕ್ಷಣಾ ಮಂತ್ರಿ ಎಂಬ ದುರಹಂಕಾರದಿಂದ ನಡೆದುಕೊಂಡಿದ್ದಾರೆ. ಸ್ಥಳೀಯ ಎಲ್ಲಾ ಪಕ್ಷದ ಶಾಸಕರು, ಸಂಸದರ ಜತೆ ಮಾತನಾಡಬೇಕಿತ್ತು’ ಎಂದು ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments