Webdunia - Bharat's app for daily news and videos

Install App

ಮೈಕ್ ತೆರವಿಗೆ ಇಂದು ಡೆಡ್ಲೈನ್!

Webdunia
ಸೋಮವಾರ, 9 ಮೇ 2022 (07:45 IST)
ಬೆಂಗಳೂರು : ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ.

ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ.

ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ ಸದಸ್ಯರು ಬೆಳಗ್ಗಿನ ಜಾವ ದೇವಸ್ಥಾನ ಮತ್ತು ಮಠದ ಮೈಕ್ನಲ್ಲಿ ಸುಪ್ರಭಾತ, ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಹಾಕುವಂತೆ ಮನವಿ ಪತ್ರ ನೀಡುತ್ತಿದ್ದಾರೆ.

ಹಾಸನದಲ್ಲೂ ಅಭಿಯಾನಕ್ಕೆ ಕೈ ಜೋಡಿಸಲಿದ್ದು, ಪ್ರತಿನಿತ್ಯ ಮೈಕ್ ಮೂಲಕ ಭಜನೆ ಮಾಡುವುದಾಗಿ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್ ತಿಳಿಸಿದರು. 

ಇತ್ತ ಆಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಹಾಗೂ ಭಕ್ತಿಗೀತೆ ಮೊಳಗಿಸುವ ಅಭಿಯಾನಕ್ಕೆ ಧಾರವಾಡದಲ್ಲಿ ಬೆಂಬಲ ವ್ಯಕ್ತವಾಗಿದೆ. ಧಾರವಾಡ ನಗರದ ಲೈನ್ ಬಜಾರ್ ಹನುಮಾನ್ ದೇವಸ್ಥಾನ, ನಗರದ ತುಳಜಾ ಭವಾನಿ ದೇವಸ್ಥಾನ, ಶಿವಾಲಯ, ದತ್ತಾತ್ರೇಯ ದೇವಸ್ಥಾನ ಸೇರಿ ಹಲವು ದೇವಸ್ಥಾನ ಕಮಿಟಿಯವರು ನಿರ್ಧರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments