ಮೈಕ್ ತೆರವಿಗೆ ಇಂದು ಡೆಡ್ಲೈನ್!

Webdunia
ಸೋಮವಾರ, 9 ಮೇ 2022 (07:45 IST)
ಬೆಂಗಳೂರು : ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ.

ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ.

ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ ಸದಸ್ಯರು ಬೆಳಗ್ಗಿನ ಜಾವ ದೇವಸ್ಥಾನ ಮತ್ತು ಮಠದ ಮೈಕ್ನಲ್ಲಿ ಸುಪ್ರಭಾತ, ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಹಾಕುವಂತೆ ಮನವಿ ಪತ್ರ ನೀಡುತ್ತಿದ್ದಾರೆ.

ಹಾಸನದಲ್ಲೂ ಅಭಿಯಾನಕ್ಕೆ ಕೈ ಜೋಡಿಸಲಿದ್ದು, ಪ್ರತಿನಿತ್ಯ ಮೈಕ್ ಮೂಲಕ ಭಜನೆ ಮಾಡುವುದಾಗಿ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್ ತಿಳಿಸಿದರು. 

ಇತ್ತ ಆಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಹಾಗೂ ಭಕ್ತಿಗೀತೆ ಮೊಳಗಿಸುವ ಅಭಿಯಾನಕ್ಕೆ ಧಾರವಾಡದಲ್ಲಿ ಬೆಂಬಲ ವ್ಯಕ್ತವಾಗಿದೆ. ಧಾರವಾಡ ನಗರದ ಲೈನ್ ಬಜಾರ್ ಹನುಮಾನ್ ದೇವಸ್ಥಾನ, ನಗರದ ತುಳಜಾ ಭವಾನಿ ದೇವಸ್ಥಾನ, ಶಿವಾಲಯ, ದತ್ತಾತ್ರೇಯ ದೇವಸ್ಥಾನ ಸೇರಿ ಹಲವು ದೇವಸ್ಥಾನ ಕಮಿಟಿಯವರು ನಿರ್ಧರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments