Publish Date: Fri, 22 Apr 2022 (07:13 IST)
Updated Date: Fri, 22 Apr 2022 (08:17 IST)
ಬೆಂಗಳೂರು : ಮಹಾರಾಷ್ಟ್ರದಲ್ಲಿ ಎಂಎನ್ಎಸ್ ಮಹಾರತಿ ಹೆಸರಿನಲ್ಲಿ ಆಜಾನ್ ದಂಗಲ್ ತೀವ್ರಗೊಳಿಸಿದ ಬೆನ್ನಲ್ಲೇ ರಾಜ್ಯದ ಹಿಂದೂ ಪರ ಸಂಘಟನೆಗಳು ಸಹ ಎದ್ದುಕುಳಿತಿವೆ.
ಮೇ 3ರೊಳಗೆ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವು ಮಾಡದೇ ಇದ್ದಲ್ಲಿ ಅಕ್ಷಯ ತೃತೀಯ ದಿನವೇ ಮಹಾರಾಷ್ಟ್ರದ ಮಾದರಿಯಲ್ಲೇ ರಾಜ್ಯದ ಎಲ್ಲಾ ದೇಗುಲದಲ್ಲಿಯೂ ಮಹಾ ಆರತಿಯ ಧ್ವನಿವರ್ಧಕ ಹಾಕ್ತೀವಿ ಎಂದು ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟಿವೆ.
ಮಸೀದಿಗಳ ಮೇಲಿನ ಧ್ವನಿವರ್ಧಕವನ್ನು ತೆಗೆಯಲು ಸರ್ಕಾರ ಮುಂದಾಗದಿದ್ದರೆ, ಮೇ 9ರಿಂದ ದೇವರ ಭಜನೆ, ಹನುಮಾನ್ ಚಾಲೀಸ್ ಅನ್ನು ದಿನದ ಐದು ಹೊತ್ತು ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.
ಇಷ್ಟು ದಿನದಿಂದ ಸರ್ಕಾರ ಏನ್ ಮಾಡ್ತಿದೆ. ಯಾರಿಗೆ ಹೆದರುತ್ತಿದೆ ಎಂದು ಶ್ರೀರಾಮಸೇನೆ ಗರಂ ಆಗಿದೆ. ಆದರೆ ಇದಕ್ಕೆ ಜಾಮೀಯಾ ಮಸೀದಿ ಮೌಲ್ವಿ ಮಕ್ಸೂದ್ ಇಮ್ರಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾವು ರೂಲ್ಸ್ ಫಾಲೋ ಮಾಡ್ತಿದ್ದೇವೆ. ಆದರೆ ತಪ್ಪು ಮಾಡದೇ ಇದ್ರೂ ಶಿಕ್ಷೆ ಕೊಡಿ ಅನ್ನೋ ತರಾ ಹಿಂದೂ ಸಂಘಟನೆಗಳು ಮಾತಾಡಿದ್ರೇ ಹೇಗೆ ಎಂದು ಪ್ರಶ್ನಿಸಿದ್ದಾರೆ.