ಕರ್ನಾಟಕಕ್ಕೆ ಕಂಟಕವಾಗುತ್ತಾ ಡಿಸೆಂಬರ್?

Webdunia
ಸೋಮವಾರ, 29 ನವೆಂಬರ್ 2021 (08:51 IST)
ಬೆಂಗಳೂರು : ಇಡೀ ಜಗತ್ತನ್ನೇ ಕಾಡಿದ, ಕಂಗೆಡಿಸಿದ, ಜನ ಜೀವನವನ್ನೇ ಬುಡಮೇಲಾಗಿಸಿದ ಕೊರೊನಾ ವೈರಸ್ ಅಟ್ಟಹಾಸದ ನೆನಪು ಇನ್ನೂ ಹಸಿ ಹಸಿಯಾಗಿಯೇ ಇದೆ.
ಕೊರೊನಾ ದಾಳಿಗೆ ಬಲಿಯಾದವರ ಮನೆ ಮಂದಿ ಇನ್ನೂ ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ತಜ್ಞರು ಈ ಹಿಂದೆಯೇ ಡಿಸೆಂಬರ್ನಲ್ಲಿ ಕೊರೊನಾ 3ನೇ ಅಲೆ ಬರುತ್ತೆ ಎಂದು ಅಚ್ಚರಿಕೆಯ ಗಂಟೆ ಬಾರಿಸಿದ್ದರು. ಡಿಸೆಂಬರ್ ಕೊನೆ ಅಥವಾ ಜನವರಿ ಆರಂಭದಲ್ಲಿ ಮೂರನೇ ಅಲೆ  ಅಂತ ಎಚ್ಚರಿಕೆ ನೀಡಿದ್ದರು.
ಕಳೆದ ಕೆಲ ದಿನಗಳಲ್ಲಿ ನಡೀತಿರೋ ಬೆಳವಣಿಗೆಗಳನ್ನ ನೋಡಿದ್ರೆ ಅದ್ಯಾಕೊ ಕೊರೊನಾ ಮತ್ತೆ ಕಣ್ಣು ಬಿಡ್ತಿದ್ಯಾ ಅನ್ನೋ ಪ್ರಶ್ನೆ ಸಹಜವಾಗಿಯೇ ಕಾಡುತ್ತೆ. ಕೊರೊನಾ ಕೇಸ್ಗಳ ಸಂಖ್ಯೆಯೂ ನಿಧಾನವಾಗಿ ಏರಿಕೆಯಾಗ್ತಿದೆ.
ಕಳೆದ ಒಂದು ವಾರದಿಂದ 250 -280 ಅಸುಪಾಸಿನಲ್ಲಿದ್ದ ಕೇಸ್ಗಳ ಸಂಖ್ಯೆ ನಿತ್ಯ 320-330 ಅಸುಪಾಸಿಗೆ ಏರಿಕೆ ಕಾಣುತ್ತಿವೆ. ಸಾವಿರಕ್ಕಿಂತ ಹೆಚ್ಚು ಕೇಸ್ಗಳು ಏರಿಕೆಯಾದ್ರೆ ಮೂರನೇ ಅಲೆ ಆರಂಭ ಎಂದು ತಜ್ಞರು ಖಚಿತವಾಗಿ ಎಚ್ಚರಿಕೆ ನೀಡಿದ್ದಾರೆ.
ಸಾಲದ್ದಕ್ಕೆ ಈ ಒಮಿಕ್ರಾನ್ ಅನ್ನೋ ಕ್ರಿಮಿಯ ಹುಟ್ಟು ಬೇರೆ. ಹೀಗಾಗಿ ಡಿಸೆಂಬರ್ ತಿಂಗಳು ಕಂಟಕವಾಗುತ್ತಾ ಅನ್ನೋ ಅನುಮಾನ ಕಾಡ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments