Webdunia - Bharat's app for daily news and videos

Install App

ಪರಿಷತ್‌ ಟಿಕೆಟ್‌ ಘೋಷಣೆ

Webdunia
ಮಂಗಳವಾರ, 24 ಮೇ 2022 (10:41 IST)
ಬೆಂಗಳೂರು : ಪರಿಷತ್ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಆಂತರಿಕ ಬೇಗುದಿ ಹೊರಬಿದ್ದಿದೆ.
 
ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲಾಗದೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ನಿರಾಸೆ ಮಾಡಿದೆ.

ತಮ್ಮ ಬೆಂಬಲಿಗರಿಗೆ ಅವಕಾಶ ಕೊಡಬೇಕೆಂದು ಪಟ್ಟು ಹಿಡಿದಿದ್ದ ಉಭಯ ನಾಯಕರಿಗೆ ಹೈಕಮಾಂಡ್ ಕ್ಯಾರೆ ಅಂದಿಲ್ಲ. ತಮ್ಮದೇ ಲೆಕ್ಕಚಾರದಡಿ ಟಿಕೆಟ್ ಘೋಷಿಸಿರುವ ವರಿಷ್ಠರು ಪಕ್ಷನಿಷ್ಠರಿಗೆ ಮನ್ನಣೆ ಹೊರತು ಗುಂಪುಗಾರಿಕೆಗೆ ಅವಕಾಶ ಇಲ್ಲ ಎಂಬ ಸಂದೇಶ ರವಾನಿಸಿದೆ. 

ಇತ್ತೀಚೆಗೆ ಪರಿಷತ್ನಿಂದ ಕಾಂಗ್ರೆಸ್ನ ಮೂವರು ನಿವೃತ್ತಿಯಾಗಿದ್ದರು. ಕೊಡವ ಸಮುದಾಯದ ವೀಣಾ ಅಚ್ಚಯ್ಯ, ಲಿಂಗಾಯತ ಸಮುದಾಯದ ಅಲ್ಲಮ್ ವೀರಭದ್ರಪ್ಪ ಹಾಗೂ ದಲಿತ ಎಡಗೈ ಸಮುದಾಯದ ಆರ್.ಬಿ.ತಿಮ್ಮಪ್ಪ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿಲ್ಲ.

ಜೊತೆಗೆ ಈ ಮೂರು ಸಮುದಾಯಗಳಿಗೂ ಪಕ್ಷ ಮನ್ನಣೆ ಕೊಟ್ಟಿಲ್ಲ. ಮೂರು ಸಮುದಾಯವನ್ನು ಹೊರತುಪಡಿಸಿ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿ ರಾಜ್ಯ ನಾಯಕರ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದೆ.

ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ, ಹಿಂದುಳಿದ ಸಮುದಾಯದ ನಾಗರಾಜ್ ಯಾದವ್ಗೆ ಪಕ್ಷ ಟಿಕೆಟ್ ನೀಡಿದೆ.

ಈ ವಿದ್ಯಮಾನದಿಂದ ಉಭಯ ನಾಯಕರಿಗೆ ಬೇಸರ ಉಂಟಾಗಿದೆ ಎನ್ನಲಾಗಿದೆ. ರಾಜ್ಯಸಭೆಯ ಅಭ್ಯರ್ಥಿಯನ್ನು ಹೈಕಮಾಂಡ್ ಇನ್ನೂ ಪ್ರಕಟಿಸಿಲ್ಲ. ಈ ವಿಚಾರದಲ್ಲೂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಶಿಫಾರಸುಗಳಿಗೆ ಹೈಕಮಾಂಡ್ ಕಿಮ್ಮತ್ತು ನೀಡುವ ಸಾಧ್ಯತೆ ಇಲ್ಲ. ವರಿಷ್ಠರು ತಮ್ಮದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಳವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

ಮುಂದಿನ ಸುದ್ದಿ
Show comments