Select Your Language

Notifications

webdunia
webdunia
webdunia
webdunia

ಬಜೆಟ್ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ : ಸಿಎಂ

ಬಜೆಟ್ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ : ಸಿಎಂ
ಬೆಂಗಳೂರು , ಬುಧವಾರ, 11 ಮೇ 2022 (13:20 IST)
ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ.

ನೀವೆಲ್ಲರೂ ನನ್ನ (ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವೆಲ್ಲರೂ ಯುವಕರಿದ್ದೀರಿ.

ಒಳ್ಳೆಯ ಕೆಲಸ ಮಾಡಲು ದೇವರು ನಿಮಗೆ ಇದೊಂದು ಅವಕಾಶ ನೀಡಿದ್ದಾನೆ. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. 
ಬಡವರ, ದೀನ ದಲಿತರ ಪರವಾದ ಕೆಲಸಗಳನ್ನು ಮಾಡಿ. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆಯನ್ನು ನೀಡಿ. ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ. ನಾನು ನಿಮ್ಮ ಜೊತೆ ಇದ್ದೇನೆ. ಆದರೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರವನ್ನು ಎಂದೂ ಸಹಿಸುವುದಿಲ್ಲ.

ಅದಕ್ಕೆ ಅವಕಾಶವನ್ನೂ ಮಾಡಿಕೊಡುವುದಿಲ್ಲ. ಈ ಮಾತುಗಳನ್ನು ನೀವು ಸ್ಪಷ್ಟವಾಗಿ ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.

ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸೋಣ. ನಿಮ್ಮ ಕಾರ್ಯವೈಖರಿಯನ್ನು ಗಮನಿಸಲಾಗುತ್ತದೆ. ಸಾರ್ವಜನಿಕರು ತರುವ ಅರ್ಜಿಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು. ನಿಮ್ಮ ಕಾರ್ಯದಲ್ಲಿ ನಿಖರತೆ ಇರಲಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸೂಚಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ತಿಂಗಳಲ್ಲೇ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಕೊಂದಳು!