Webdunia - Bharat's app for daily news and videos

Install App

ರತನ್ ಟಾಟಾ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

Webdunia
ಗುರುವಾರ, 31 ಮಾರ್ಚ್ 2022 (15:25 IST)
ನವದೆಹಲಿ : ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.

ಒಬ್ಬ ವ್ಯಕ್ತಿಗೆ ಅತ್ಯುನ್ನತ ನಾಗರಿಕ ಗೌರವ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ನ್ಯಾಯಾಲಯಕ್ಕೆ ಸಂಬಂಧಿಸಿದ್ದಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ. 

ಇದು ಯಾವ ರೀತಿಯ ಮನವಿ? ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಲು ಸಾಧ್ಯವೆ ಎಂದು ಪೀಠ ಪ್ರಶ್ನಿಸಿದೆ.

ಅರ್ಜಿದಾರರ ಪರ ವಕೀಲರು, ಕನಿಷ್ಠ ಪಕ್ಷ ಸರ್ಕಾರಕ್ಕೆ ಮನವಿ ಮಾಡಬಹುದು ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ, ಹೋಗಿ ವಿನಂತಿಯನ್ನು ಮಾಡಿ. ನ್ಯಾಯಾಲಯದ ಮೆಟ್ಟಿಲೇರುವ ಪ್ರಶ್ನೆ ಎಲ್ಲಿದೆ ಎಂದು ತಿಳಿಸಿದ್ದಾರೆ. 

ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸುವುದಾಗಿ ಹೇಳಿದ ನಂತರ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂತೆಗೆದುಕೊಂಡರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments