ಕೊರೊನಾ ನಡುವೆ ಡೆಂಗ್ಯೂ ಆರ್ಭಟ : ಡೆಂಗ್ಯೂಗೆ ಮತ್ತಿಬ್ಬರು ಬಲಿ

Webdunia
ಮಂಗಳವಾರ, 14 ಸೆಪ್ಟಂಬರ್ 2021 (12:13 IST)
ಉತ್ತರ ಪ್ರದೇಶ : ಕೊರೊನಾ ನಡುವೆ ದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಸಹ ಹೆಚ್ಚಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು ಡೆಂಗ್ಯೂಗೆ ಇನ್ನೂ ಇಬ್ಬರು ಬಲಿಯಾಗಿದ್ದಾರೆ.

ಇದನ್ನು ಸೇರಿ ಉತ್ತರ ಪ್ರದೇಶದಲ್ಲಿ ವೈರಲ್ ಜ್ವರದಿಂದ ಸಾವನ್ನಪ್ಪಿದವರ ಸಂಖ್ಯೆ ಸೋಮವಾರ 60 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಂಗ್ಯೂಗೆ 14 ವರ್ಷದ ಹುಡುಗಿ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ, ಆದರೆ ಇನ್ನೊಂದು ಮಗು ಆಸ್ಪತ್ರೆಗೆ ಕರೆತೆರುವ ಮುನ್ನವೇ ಸಾವನ್ನಪ್ಪಿತ್ತು ಎಂದು ಅಗರ್ ಪ್ರದೇಶದ ಆರೋಗ್ಯ ವಿಭಾಗದ ಹೆಚ್ಚುವರಿ ನಿರ್ದೇಶಕರಾದ ಎಕೆ ಸಿಂಗ್ ತಿಳಿಸಿದ್ದಾರೆ . ಇನ್ನು ಬಾಲಕಿಯ ಸಾವಿನ ನಂತರ, ಆಕೆಯ ಸಹೋದರಿ ವಿಭಾಗೀಯ ಆಯುಕ್ತರಾದ ಅಮಿತ್ ಗುಪ್ತಾ ಅವರ ವಾಹನದ ಮುಂದೆ ಕುಳಿತು ಪ್ರತಿಭಟನೆ ಮಾಡಲು ಆರಂಭಿಸಿದ್ದರು, ಆದರೆ ನಂತರ ಅಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.
ಈ ಮಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್, ಚಂದ್ರ ವಿಜಯ್ ಸಿಂಗ್ ಅವರು ಲ್ಯಾಬ್ಗಳು ವರದಿ ನೀಡಲು ಅಧಿಕ ಶುಲ್ಕ ವಿಧಿಸುವ ಕುರಿತು ಪತ್ರಿಕೆ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ತೆಗೆದುಕೊಳ್ಳಬೇಕಾದ ದರಗಳ ಬಗ್ಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಆಗ್ರಾದಿಂದ 50 ಕಿಮೀ ಮತ್ತು ಲಕ್ನೋದಿಂದ 320 ಕಿಮೀ ದೂರದಲ್ಲಿರುವ ಫಿರೋಜಾಬಾದ್ ಕಳೆದ ಮೂರು ವಾರಗಳಿಂದ ಡೆಂಗ್ಯೂ ಮತ್ತು ಮಾರಣಾಂತಿಕ ವೈರಲ್ ಜ್ವರ ಹೆಚ್ಚಾಗುತ್ತಿದ್ದು, ಮಕ್ಕಳು ಬಲಿಯಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments