ಗೃಹ ಆರೋಗ್ಯ ಜಾರಿಗೆ ಇಲಾಖೆ ಚಿಂತನೆ: ಏನಿದು ?

Webdunia
ಸೋಮವಾರ, 4 ಸೆಪ್ಟಂಬರ್ 2023 (14:05 IST)
ಬೆಂಗಳೂರು : ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಹೊಸ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಪ್ಲ್ಯಾನ್ ಮಾಡ್ತಿದೆ. ಗೃಹ ಆರೋಗ್ಯ ಯೋಜನೆ ಜಾರಿಗೆ ಚಿಂತನೆ ನಡೆದಿದ್ದು, ಮನೆ ಬಾಗಿಲಿಗೆ ವೈದ್ಯರನ್ನ ಕಳುಹಿಸಿ ತಪಾಸಣೆ ಮಾಡಿಸಲು ಚರ್ಚೆ ನಡೆಸಲಾಗುತ್ತಿದೆ. ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿ ಸಾಧಕ-ಬಾಧಕಗಳನ್ನ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿದೆ.
 
ಕಾಂಗ್ರೆಸ್ ಸರ್ಕಾರ ರಚನೆ ಆದ ಮೇಲೆ ಭರವಸೆ ನೀಡಿದ್ದ ಐದರಲ್ಲಿ ನಾಲ್ಕು ಗ್ಯಾರಂಟಿಗಳನ್ನ ಜಾರಿ ಮಾಡಿದೆ. ಯುವ ನಿಧಿ ಯೋಜನೆ ಜಾರಿ ಮಾಡಬೇಕಿದೆ. ಈ ಮಧ್ಯೆ ಆರೋಗ್ಯ ಇಲಾಖೆ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೆ ಹೊಸ ಯೋಜನೆ ಜಾರಿಗೆ ಚಿಂತನೆ ಮಾಡ್ತಿದೆ. ಗೃಹ ಆರೋಗ್ಯ ಯೋಜನೆ ಜಾರಿಗೆ ಪ್ಲ್ಯಾನ್ ಮಾಡ್ತಿದೆ.

ಮನೆ ಮನೆಗೆ ವೈದ್ಯರನ್ನ ಕಳುಹಿಸಿ ಆರೋಗ್ಯ ತಪಾಸಣೆ ಮಾಡಿಸಲು ಮುಂದಾಗಿದೆ. ಮನೆ ಮನೆಗೆ ತೆರಳಿ ಬಿಪಿ, ಶುಗರ್, ಜ್ವರ, ಸಣ್ಣ ಪುಟ್ಟ ಖಾಯಿಲೆಗಳಿಗೆ ಟ್ರೀಟ್ ಮೆಂಟ್ ನೀಡಿಸಲು ಮುಂದಾಗಿದೆ.

ಈ ಯೋಜನೆ ಜಾರಿ ಮಾಡಲು ಪೂರ್ವ ತಯಾರಿ ನಡೆಯುತ್ತಾ ಇದ್ದು, ಕ್ಯಾಬಿನೆಟ್ ಮುಂದೆ ಪ್ರಸ್ತಾಪ ಆಗಲಿದೆಯಂತೆ. ಕ್ಯಾಬಿನೆಟ್ ನಲ್ಲಿ ಅಪ್ರೂವ್ ಆದ ಬಳಿಕ ಪ್ರಾಯೋಗಿಕವಾಗಿ ಎಂಟು ಜಿಲ್ಲೆಗಳಲ್ಲಿ ಜಾರಿ ಮಾಡಲು ಮುಂದಾಗಿದೆ. ಬೇಕಾಗುವ ಸಿಬ್ಬಂದಿಯನ್ನ ಸರ್ಕಾರಿ ಆಸ್ಪತ್ರೆಯಲ್ಲಿ ಇರುವ ವೈದ್ಯರನ್ನೇ ಬಳಸಿಕೊಳ್ಳಲಿದ್ದಾರಂತೆ. ಬೇಕಾಗುವ ಖರ್ಚು ಮತ್ತು ವೆಚ್ಚಗಳ ಬಗ್ಗೆ ಪರಿಶೀಲನೆ ನಡೆಯುತ್ತಾ ಇದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments