Publish Date: Fri, 19 May 2023 (09:05 IST)
Updated Date: Fri, 19 May 2023 (08:53 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಣಕಾಸು ಖಾತೆಯನ್ನು ನೀಡಬೇಕೆಂದು ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಸಿದ್ದರಾಮಯ್ಯನವರಿಗೆ ಸಿಎಂ ಹುದ್ದೆ ಸಿಕ್ಕಿದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ತನಗೆ ಹಣಕಾಸು ಖಾತೆಯನ್ನು ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದರು. ಆದರೆ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬೇರೆ ಯಾವುದೇ ಖಾತೆಯನ್ನು ಬೇಕಾದರೆ ಕೊಡಿ. ಆದರೆ ಹಣಕಾಸು ಖಾತೆಯನ್ನು ನಾನೇ ಇಟ್ಟುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಡಿಕೆಶಿಗೆ ಎರಡು ಪ್ರಬಲ ಖಾತೆಯನ್ನು ಹೈಕಮಾಂಡ್ ನೀಡಿದೆ.