Select Your Language

Notifications

webdunia
webdunia
webdunia
webdunia

ಮಳೆಯಬ್ಬರಕ್ಕೆ ಬೆಳೆಗಳು ನಾಶ!

ಮಳೆಯಬ್ಬರಕ್ಕೆ ಬೆಳೆಗಳು ನಾಶ!
ಕೋಲಾರ , ಸೋಮವಾರ, 18 ಏಪ್ರಿಲ್ 2022 (07:45 IST)
ಕೋಲಾರ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾವು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲ ಕಚ್ಚಿವೆ.

ಕಳೆದ 3 ದಿನಗಳಿಂದ ಬೆಂಗಳೂರು ಮಾತ್ರವಲ್ಲದೆ ಕೋಲಾರ ಜಿಲ್ಲೆಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ಈ ಮಧ್ಯೆ ಕಳೆದ ರಾತ್ರಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ, ಕೆಜಿಎಫ್ ಹಾಗೂ ಬಂಗಾರಪೇಟೆ ತಾಲೂಕಿನಲ್ಲಿ ಬಿರುಗಾಳಿ ಸಹಿತ ಹೆಚ್ಚು ಮಳೆಯಾಗಿದ್ದು, ಬಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.

ಶ್ರೀನಿವಾಸಪುರ ತಾಲೂಕಿನ ಕದಿರಂಪಲ್ಲಿ ಗ್ರಾಮದ ಸುತ್ತಮುತ್ತ ಮಳೆಯಿಂದ ಮಾವಿನ ಕಾಯಿ ಮತ್ತು ಮರಗಳು ನೆಲಕ್ಕುರುಳಿ ಲಕ್ಷಾಂತರ ರೂಪಾಯಿ ನಷ್ಟ ಎದುರಾಗಿದೆ.

ಗುಡುಗು, ಸಿಡಿಲು, ಬೀರುಗಾಳಿ ಸಹಿತ ಮಳೆಗೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮಾವಿನ ಕಾಯಿಗಳು ನೆಲಕಚ್ಚಿವೆ. ವರ್ಷಕ್ಕೆ ಒಂದೆ ಬೆಳೆಯಾಗಿರುವ ಮಳೆಯಿಂದ ರಾತ್ರೋರಾತ್ರಿ ಮಾವಿನ ಫಸಲು ಕಳೆದುಕೊಂಡ ರೈತರು ಕಣ್ಣೀರಿಡುವಂತಾಗಿದೆ.

ಇನ್ನು ಒಂದು ತಿಂಗಳಲ್ಲಿ ಮಾವಿನ ಫಸಲು ಮಾರುಕಟ್ಟೆಗೆ ಹೋಗಿ ಒಂದಿಷ್ಟು ಹಣ ನೋಡಲು ಕಾತುರದಿಂದ ಕಾಯುತ್ತಿದ್ದ ರೈತನು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಾಗಿದೆ. ಮಾವಿನ ಫಸಲು ಮಳೆಯಿಂದ ನೆಲಕ್ಕುದುರಿ ಸುಮಾರು 8 ಲಕ್ಷ ರೂ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. 

ಹಲವೆಡೆ ತೆಂಗಿನ ಮರ ಹಾಗೂ ಕರೆಂಟ್ ಕಂಬಗಳು ನೆಲಕ್ಕುರುಳಿವೆ. ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಸುತ್ತಮುತ್ತ ವಿವಿಧ ಹಣ್ಣು ತರಕಾರಿ ಬೆಳೆಗಳು ನಾಶವಾಗಿದೆ. ಶ್ರೀನಿವಾಸಪುರ ಪಟ್ಟಣದ ಪವನ್ ಆಸ್ಪತ್ರೆ ಬಳಿ ಸಿಡಿಲು ಬಡಿದ ಹಿನ್ನೆಲೆ ತೆಂಗಿನ ಮರ ಹೊತ್ತಿ ಉರಿದ ಘಟನೆ ಕೂಡ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಸ್ತಮೈಥುನ ಮಾಡಲು ಹೋಗಿ ಶ್ವಾಸಕೋಶಕ್ಕೆ ಪೆಟ್ಟು ಮಾಡಿಕೊಂಡ!