Webdunia - Bharat's app for daily news and videos

Install App

ಮಳೆಯಬ್ಬರಕ್ಕೆ ಬೆಳೆಗಳು ನಾಶ!

Webdunia
ಸೋಮವಾರ, 18 ಏಪ್ರಿಲ್ 2022 (07:45 IST)
ಕೋಲಾರ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾವು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲ ಕಚ್ಚಿವೆ.

ಕಳೆದ 3 ದಿನಗಳಿಂದ ಬೆಂಗಳೂರು ಮಾತ್ರವಲ್ಲದೆ ಕೋಲಾರ ಜಿಲ್ಲೆಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ಈ ಮಧ್ಯೆ ಕಳೆದ ರಾತ್ರಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ, ಕೆಜಿಎಫ್ ಹಾಗೂ ಬಂಗಾರಪೇಟೆ ತಾಲೂಕಿನಲ್ಲಿ ಬಿರುಗಾಳಿ ಸಹಿತ ಹೆಚ್ಚು ಮಳೆಯಾಗಿದ್ದು, ಬಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.

ಶ್ರೀನಿವಾಸಪುರ ತಾಲೂಕಿನ ಕದಿರಂಪಲ್ಲಿ ಗ್ರಾಮದ ಸುತ್ತಮುತ್ತ ಮಳೆಯಿಂದ ಮಾವಿನ ಕಾಯಿ ಮತ್ತು ಮರಗಳು ನೆಲಕ್ಕುರುಳಿ ಲಕ್ಷಾಂತರ ರೂಪಾಯಿ ನಷ್ಟ ಎದುರಾಗಿದೆ.

ಗುಡುಗು, ಸಿಡಿಲು, ಬೀರುಗಾಳಿ ಸಹಿತ ಮಳೆಗೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮಾವಿನ ಕಾಯಿಗಳು ನೆಲಕಚ್ಚಿವೆ. ವರ್ಷಕ್ಕೆ ಒಂದೆ ಬೆಳೆಯಾಗಿರುವ ಮಳೆಯಿಂದ ರಾತ್ರೋರಾತ್ರಿ ಮಾವಿನ ಫಸಲು ಕಳೆದುಕೊಂಡ ರೈತರು ಕಣ್ಣೀರಿಡುವಂತಾಗಿದೆ.

ಇನ್ನು ಒಂದು ತಿಂಗಳಲ್ಲಿ ಮಾವಿನ ಫಸಲು ಮಾರುಕಟ್ಟೆಗೆ ಹೋಗಿ ಒಂದಿಷ್ಟು ಹಣ ನೋಡಲು ಕಾತುರದಿಂದ ಕಾಯುತ್ತಿದ್ದ ರೈತನು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಾಗಿದೆ. ಮಾವಿನ ಫಸಲು ಮಳೆಯಿಂದ ನೆಲಕ್ಕುದುರಿ ಸುಮಾರು 8 ಲಕ್ಷ ರೂ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. 

ಹಲವೆಡೆ ತೆಂಗಿನ ಮರ ಹಾಗೂ ಕರೆಂಟ್ ಕಂಬಗಳು ನೆಲಕ್ಕುರುಳಿವೆ. ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಸುತ್ತಮುತ್ತ ವಿವಿಧ ಹಣ್ಣು ತರಕಾರಿ ಬೆಳೆಗಳು ನಾಶವಾಗಿದೆ. ಶ್ರೀನಿವಾಸಪುರ ಪಟ್ಟಣದ ಪವನ್ ಆಸ್ಪತ್ರೆ ಬಳಿ ಸಿಡಿಲು ಬಡಿದ ಹಿನ್ನೆಲೆ ತೆಂಗಿನ ಮರ ಹೊತ್ತಿ ಉರಿದ ಘಟನೆ ಕೂಡ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments