Webdunia - Bharat's app for daily news and videos

Install App

ಮಳೆಯಬ್ಬರಕ್ಕೆ ಬೆಳೆಗಳು ನಾಶ!

Webdunia
ಸೋಮವಾರ, 18 ಏಪ್ರಿಲ್ 2022 (07:45 IST)
ಕೋಲಾರ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾವು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲ ಕಚ್ಚಿವೆ.

ಕಳೆದ 3 ದಿನಗಳಿಂದ ಬೆಂಗಳೂರು ಮಾತ್ರವಲ್ಲದೆ ಕೋಲಾರ ಜಿಲ್ಲೆಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ಈ ಮಧ್ಯೆ ಕಳೆದ ರಾತ್ರಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ, ಕೆಜಿಎಫ್ ಹಾಗೂ ಬಂಗಾರಪೇಟೆ ತಾಲೂಕಿನಲ್ಲಿ ಬಿರುಗಾಳಿ ಸಹಿತ ಹೆಚ್ಚು ಮಳೆಯಾಗಿದ್ದು, ಬಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.

ಶ್ರೀನಿವಾಸಪುರ ತಾಲೂಕಿನ ಕದಿರಂಪಲ್ಲಿ ಗ್ರಾಮದ ಸುತ್ತಮುತ್ತ ಮಳೆಯಿಂದ ಮಾವಿನ ಕಾಯಿ ಮತ್ತು ಮರಗಳು ನೆಲಕ್ಕುರುಳಿ ಲಕ್ಷಾಂತರ ರೂಪಾಯಿ ನಷ್ಟ ಎದುರಾಗಿದೆ.

ಗುಡುಗು, ಸಿಡಿಲು, ಬೀರುಗಾಳಿ ಸಹಿತ ಮಳೆಗೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮಾವಿನ ಕಾಯಿಗಳು ನೆಲಕಚ್ಚಿವೆ. ವರ್ಷಕ್ಕೆ ಒಂದೆ ಬೆಳೆಯಾಗಿರುವ ಮಳೆಯಿಂದ ರಾತ್ರೋರಾತ್ರಿ ಮಾವಿನ ಫಸಲು ಕಳೆದುಕೊಂಡ ರೈತರು ಕಣ್ಣೀರಿಡುವಂತಾಗಿದೆ.

ಇನ್ನು ಒಂದು ತಿಂಗಳಲ್ಲಿ ಮಾವಿನ ಫಸಲು ಮಾರುಕಟ್ಟೆಗೆ ಹೋಗಿ ಒಂದಿಷ್ಟು ಹಣ ನೋಡಲು ಕಾತುರದಿಂದ ಕಾಯುತ್ತಿದ್ದ ರೈತನು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಾಗಿದೆ. ಮಾವಿನ ಫಸಲು ಮಳೆಯಿಂದ ನೆಲಕ್ಕುದುರಿ ಸುಮಾರು 8 ಲಕ್ಷ ರೂ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. 

ಹಲವೆಡೆ ತೆಂಗಿನ ಮರ ಹಾಗೂ ಕರೆಂಟ್ ಕಂಬಗಳು ನೆಲಕ್ಕುರುಳಿವೆ. ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಸುತ್ತಮುತ್ತ ವಿವಿಧ ಹಣ್ಣು ತರಕಾರಿ ಬೆಳೆಗಳು ನಾಶವಾಗಿದೆ. ಶ್ರೀನಿವಾಸಪುರ ಪಟ್ಟಣದ ಪವನ್ ಆಸ್ಪತ್ರೆ ಬಳಿ ಸಿಡಿಲು ಬಡಿದ ಹಿನ್ನೆಲೆ ತೆಂಗಿನ ಮರ ಹೊತ್ತಿ ಉರಿದ ಘಟನೆ ಕೂಡ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments