Select Your Language

Notifications

webdunia
webdunia
webdunia
webdunia

ಪೇಜಾವರ ಶ್ರೀಗಳ ಹೇಳಿಕೆಯಿಂದ ಮುಜುಗರಕ್ಕೀಡಾಯಿತೇ ಬಿಜೆಪಿ?

ಪೇಜಾವರ ಶ್ರೀಗಳ ಹೇಳಿಕೆಯಿಂದ ಮುಜುಗರಕ್ಕೀಡಾಯಿತೇ ಬಿಜೆಪಿ?
ಮಂಗಳೂರು , ಮಂಗಳವಾರ, 5 ಜೂನ್ 2018 (12:20 IST)
ಮಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರವಸೆ ಉಳಿಸಿಕೊಳ್ಳಲು ವಿಫಲವಾಗಿದೆ ಎಂದು ಇತ್ತೀಚೆಗೆ ಪೇಜಾವರ ಶ್ರೀಗಳು ನೀಡಿದ್ದ ಹೇಳಿಕೆ ರಾಜ್ಯ ಬಿಜೆಪಿಗೆ ಮುಜುಗರವಾಯಿತೇ?

ಇದೀಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪೇಜಾವರ ಶ್ರೀಗಳ ಹೇಳಿಕೆಗೆ ತೇಪೆ ಹಚ್ಚುವ ಕೆಲಸ ಮಾಡಿರುವುದನ್ನು ಗಮನಿಸಿದರೆ ಹಾಗೆಯೇ ಅನಿಸುತ್ತಿದೆ.

ಮಂಗಳೂರಿನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ‘ಪೇಜಾವರ ಶ್ರೀಗಳು ಸನ್ಯಾಸಿಗಳು. ಅವರಿಗೆ ರಾಜಕೀಯ ಗೊತ್ತಿಲ್ಲ. ಮಾಹಿತಿ ಕೊರತೆಯಿಂದ ಈ ರೀತಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಲಾಗುತ್ತದೆ’ ಎಂದು ಶೋಭಾ ಕರಂದ್ಲಾಜೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯಾರು ಬೇಕಾದ್ರೂ ಸಚಿವರಾಗಲಿ ನಂಗೇನು? ಜೆಡಿಎಸ್ ಶಾಸಕ ಬಸವರಾಜ ಹೊರಟ್ಟಿ ಪ್ರಶ್ನೆ