Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಬಳಿಕ ಸಚಿವ ಡಿಕೆಶಿಯಿಂದ ಕಾಂಗ್ರೆಸ್ ನಾಯಕರಿಗೆ ಭೂರಿ ಭೋಜನ

ಸಿದ್ದರಾಮಯ್ಯ ಬಳಿಕ ಸಚಿವ ಡಿಕೆಶಿಯಿಂದ ಕಾಂಗ್ರೆಸ್ ನಾಯಕರಿಗೆ ಭೂರಿ ಭೋಜನ
ಬೆಂಗಳೂರು , ಮಂಗಳವಾರ, 10 ಜುಲೈ 2018 (09:03 IST)
ಬೆಂಗಳೂರು: ಮೊನ್ನೆಯಷ್ಟೇ ಸಮನ್ವಯ ಸಮಿತಿ ಅಧ್ಯಕ್ಷರಾದ ಖುಷಿಗೆ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಸಿದ್ದರಾಮಯ್ಯ ಭೋಜನ ಕೂಟ ಏರ್ಪಡಿಸಿದ್ದರು. ಇದೀಗ ಸಚಿವ ಡಿಕೆ ಶಿವಕುಮಾರ್ ಸರದಿ.

ಇಂದು ಸಚಿವ ಡಿಕೆ ಶಿವಕುಮಾರ್ ತಮ್ಮ ಪಕ್ಷದ ಶಾಸಕರು, ಸಂಸದರಿಗಾಗಿ ಪಂಚತಾರಾ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಕಾಂಗ್ರೆಸ್ ನ ಬಹುತೇಕ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಜತೆಗೆ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನ ಸಚಿವರಿಗೂ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

ಇಂದು ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಔತಣ ಕೂಟ ನಡೆಯಲಿದೆ. ವಿಶೇಷವೆಂದರೆ ಸಿದ್ದರಾಮಯ್ಯ ಕೂಡಾ ಇಲ್ಲಿಯೇ ಶಾಸಕರಿಗಾಗಿ ಔತಣ ಕೂಟ ಏರ್ಪಡಿಸಿದ್ದರು. ಅಂತೂ ಈ ನಾಯಕರು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಔತಣ ಕೂಟವನ್ನು ವೇದಿಕೆಯಾಗಿಸುತ್ತಿರುವುದಂತೂ ಸುಳ್ಳಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿಯಲ್ಲಿ ಮಳೆಗೆ ಇಂದು ಕೊಂಚ ಬಿಡುವು, ಅಂತೂ ಶಾಲೆ ಶುರು!