Webdunia - Bharat's app for daily news and videos

Install App

ಸಿಟ್ಟಿಗೆದ್ದ ಡಿಕೆಶಿ ಬ್ರದರ್ಸ್ ಹೋಟೆಲ್ ನಡೆದ ಸಭೆಯಲ್ಲಿ ಹೇಳಿದ್ದೇನು?

Webdunia
ಗುರುವಾರ, 24 ಮೇ 2018 (08:58 IST)
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಕ್ತ ಹುದ್ದೆ ಸಿಗದ ನಿರಾಶೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಸಹೋದರ ಡಿಕೆ ಸುರೇಶ್ ಸಿಟ್ಟಿಗೆದ್ದಿದ್ದಾರೆ ಎನ್ನಲಾಗಿದೆ.

ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ್, ಕೆಸಿ ವೇಣುಗೋಪಾಲ್ ಮುಂತಾದ ನಾಯಕರ ಎದುರೇ ಡಿಕೆಶಿ ಸಹೋದರರು ಕೂಗಾಡಿದ್ದಾರೆ ಎಂದು ಕೆಲವು ಖಾಸಗಿ ವಾಹಿನಿಗಳು ವರದಿ ಮಾಡಿವೆ.

‘ಬಾಗಿಲು ಕಾಯೋಕೆ ಮಾತ್ರ ನಾವು, ಅಧಿಕಾರ ಅನುಭವಿಸೋಕೆ ಬೇರೆಯವರು ಯಾಕೆ?’ ಎಂದು ಡಿಕೆ ಸಹೋದರರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಆಪರೇಷನ್ ಕಮಲಕ್ಕೆ ತುತ್ತಾಗದಂತೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಡಿಕೆ ಸಹೋದರರು ಪರಿಶ್ರಮ ಪಟ್ಟಿದ್ದರು. ಅವರ ಪರಿಶ್ರಮಕ್ಕೆ ಮೈತ್ರಿ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಬೆಲೆ ಸಿಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಅದಕ್ಕೆ ಹೈಕಮಾಂಡ್ ಒಪ್ಪಿಲ್ಲ.

ಈ ಹಿನ್ನಲೆಯಲ್ಲಿ ಡಿಕೆ ಸಹೋದರರು ಸಿಟ್ಟಿಗೆದ್ದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಡಿಕೆಶಿ ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೆ, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಎಂದಿನಂತೆ ನಗುಮೊಗದಿಂದಲೇ ಹಾಜರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments