ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಬೇಕೇ?

Webdunia
ಭಾನುವಾರ, 23 ಜನವರಿ 2022 (07:02 IST)
ಬೆಂಗಳೂರು : ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವುದು ಸರಿಯಲ್ಲ ಎಂದು ಖ್ಯಾತ ವೈದ್ಯ ಹಾಗೂ ಕೋವಿಡ್ ನಿಗ್ರಹ ಕಾರ್ಯದಿಂದ ರಾಷ್ಟ್ರದ ಗಮನ ಸೆಳೆದ ಡಾ. ಅನಿಲ್ ಕುಮಾರ್ ಅವುಲಪ್ಪ ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೋವಿಡ್ ಸಂದರ್ಭದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಜ್ಞ ವೈದ್ಯರ ಜೊತೆಗಿನ ಸಂವಾದ ಸರಣಿಯಲ್ಲಿ ಮೂರನೇ ಅಲೆಯ ಆತಂಕದ ಬಗ್ಗೆ ಡಾ.ಅನಿಲ್ಕುಮಾರ್ ಮಾತನಾಡಿದರು.

''ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಪ್ರಕೃತಿ ಸಹಜವಾಗಿಯೇ ಹೆಚ್ಚಿರುತ್ತದೆ. ಮಕ್ಕಳಿಗೆ ಲಸಿಕೆ ಹಾಕುವುದನ್ನು ಸರ್ವೋಚ್ಚ ನ್ಯಾಯಾಲಯ ಸಹ ಕಡ್ಡಾಯ ಮಾಡಿಲ್ಲ. ಪೋಷಕರೇ ಈ ಬಗ್ಗೆ ನಿರ್ಧರಿಸಲು ಅನುಮತಿ ನೀಡಿದೆ. ಹೀಗಿರುವಾಗ ರಾಜ್ಯದ ಎಲ್ಲೆಡೆ ಶಾಲೆಗಳು ಲಸಿಕೆಯನ್ನು ಕಡ್ಡಾಯವಾಗಿ ಹೇರುತ್ತಿರುವುದು ತಪ್ಪು'' ಎಂದು ಅಭಿಪ್ರಾಯಪಟ್ಟರು.

''ಮೂರನೇ ಅಲೆಯನ್ನು ಎದುರಿಸಲು ಬೂಸ್ಟರ್ ಡೋಸ್ (ಮುನ್ನೆಚ್ಚರಿಕೆ ಲಸಿಕೆ)ಅಗತ್ಯವೆಂದು ಮಾಡಿರುವ ಪ್ರಚಾರದ ಬಗ್ಗೆ ಮಾತನಾಡಿದ ಅವರು ''ಬೂಸ್ಟರ್ಡೋಸ್ ಕಡ್ಡಾಯವೇನಲ್ಲ. ಮೂರನೆ ಅಲೆ ಪ್ರಾಣಾಪಕಾರಿಯಾಗಿ ಪರಿವರ್ತನೆಯಾಗಿಲ್ಲ. ಎರಡನೆಯ ಅಲೆಯಂತಹ ಆತಂಕ ಇದರಲ್ಲಿ ಕಾಣಿಸಿಲ್ಲ.
ಮೂರನೆ ಅಲೆ ಅತಿ ವೇಗವಾಗಿ ಹರಡುವ ಗುಣ ಹೊಂದಿದೆ. ಆದರೆ ಪ್ರಾಣಕ್ಕೆ ಕುತ್ತು ತರುವುದಿಲ್ಲ. ಸಾಂಕ್ರಾಮಿಕ ರೋಗಗಳು ಹೊಸ ರೂಪ ಪಡೆಯುತ್ತಾ ಹೋಗುತ್ತವೆ. ಆದರೆ ಕ್ರಮೇಣ ಅದರ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ''

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments