Select Your Language

Notifications

webdunia
webdunia
webdunia
webdunia

ಮೇಕೆದಾಟು ನಿರ್ಮಾಣಕ್ಕೆ ಅನುಮತಿ ನೀಡಲ್ಲ : ಸರ್ಕಾರ

webdunia
ನವದೆಹಲಿ , ಭಾನುವಾರ, 24 ಜುಲೈ 2022 (07:38 IST)
ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ತಮಿಳುನಾಡು ಸರ್ಕಾರ ಹೇಳಿದೆ.
 
ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಿನ್ನೆಲೆ ಪ್ರಕರಣ ಸಂಬಂಧ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಕಳೆದ ವಿಚಾರಣೆ ವೇಳೆ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ ಗೆ ಉತ್ತರಿಸಿರುವ ತಮಿಳುನಾಡು ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣ ಬಗ್ಗೆ ನಿರ್ಧರಿಸುವ ಯಾವುದೇ ಅಧಿಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಇಲ್ಲ ಎಂದು ಹೇಳಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸುಪ್ರೀಂಕೋರ್ಟ್ ನೀಡಿದ ಕಾರ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು, ನೀರು ಹಂಚಿಕೆ ಬಗ್ಗೆ ಪರಿಶೀಲನೆ ಮಾಡಬೇಕು. ಈ ಪ್ರಾಧಿಕಾರಕ್ಕೆ ಅಣೆಕಟ್ಟು ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸುವ ಅಧಿಕಾರ ಇಲ್ಲ. ಹೀಗಾಗಿ ತನ್ನ ಸಭೆಯಲ್ಲಿ ಅಣೆಕಟ್ಟು ನಿರ್ಮಾಣದ ಬಗ್ಗೆ ಅಥವಾ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು ಎಂದು ಹೇಳಿದೆ.

ಕಳೆದ ಒಂಭತ್ತು ವರ್ಷದಲ್ಲಿ ಐದು ವರ್ಷ ಕರ್ನಾಟಕ ಸಮರ್ಪಕ ನೀರು ಹರಿಸದೇ ತಮಿಳುನಾಡಿಗೆ ಮೋಸ ಮಾಡಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕೆಳ ಹಂತದ ರಾಜ್ಯಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಅಣೆಕಟ್ಟು ನಿರ್ಮಾಣ ಮಾಡಬಾರದು ಎಂದು ತನ್ನ ಅಫಿಡೆವಿಟ್ ನಲ್ಲಿ ಉಲ್ಲೇಖಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸ್ಮೃತಿ ಇರಾನಿಯನ್ನು ವಜಾಗೊಳಿಸುವಂತೆ ಒತ್ತಾಯ?