Webdunia - Bharat's app for daily news and videos

Install App

ಸುಸ್ಥಿರ ಸಾರಿಗೆ ಪ್ರಶಸ್ತಿ ಪಡೆದ ನಗರ ನಿಮಗೆ ಗೊತ್ತೇ? ತಿಳಿಯಿರಿ

Webdunia
ಸೋಮವಾರ, 25 ಅಕ್ಟೋಬರ್ 2021 (18:31 IST)
ಕೇರಳ,ಅ.25 : 'ಅತ್ಯಂತ ಸುಸ್ಥಿರ ಸಾರಿಗೆ ವ್ಯವಸ್ಥೆಯನ್ನು ಹೊಂದಿರುವ ನಗರ ' ಪ್ರಶಸ್ತಿಯನ್ನು ಕೇರಳವು ಗೆದ್ದುಕೊಂಡಿದೆ ಎಂದು ರಾಜ್ಯದ ಸಾರಿಗೆ ಸಚಿವ ಆಯಂಟನಿ ರಾಜು ಅವರು ಇಲ್ಲಿ ತಿಳಿಸಿದರು.
ಅ.29ರಂದು ದಿಲ್ಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ ಸಿಂಗ್ ಪುರಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿರುವರು.
ಕೊಚ್ಚಿ ನಗರದಲ್ಲಿ ಸಾರಿಗೆ ಸೌಲಭ್ಯಗಳನ್ನು ಹೆಚ್ಚಿಸಲು ಜಾರಿಗೊಳಿಸಲಾಗಿರುವ ಕೊಚ್ಚಿ ಮೆಟ್ರೊ,ವಾಟರ್ ಮೆಟ್ರೊ ಮತ್ತು ಇ-ಮೊಬಿಲಿಟಿಯಂತಹ ಯೋಜನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ, ವಿವಿಧ ಸಾರಿಗೆ ಸೌಲಭ್ಯಗಳನ್ನು ಡಿಜಿಟಲೀಕರಣ ಮತ್ತು ಏಕತ್ರಗೊಳಿಸಿರುವ ಕೊಚ್ಚಿ ಓಪನ್ ಮೊಬಿಲಿಟಿ ನೆಟ್ವರ್ಕ್ನ ರಚನೆಯೂ ಪ್ರಶಸ್ತಿಯನ್ನು ಗೆಲ್ಲಲು ನೆರವಾಗಿದೆ ಎಂದು ಸಚಿವರು ತಿಳಿಸಿದರು.
ದೇಶದಲ್ಲಿಯ ವಿವಿಧ ರಾಜ್ಯಗಳು ಮತ್ತು ಕೇಂದ್ರ ಆಡಳಿತ ಪ್ರದೇಶಗಳಲ್ಲಿಯ ಸಾರಿಗೆ ಸೌಲಭ್ಯಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments