Webdunia - Bharat's app for daily news and videos

Install App

ರಾಜ್ಯದ ಪದವಿ ಕಾಲೇಜುಗಳಿಗೆ 'ಡಾ.ಅಶ್ವಥ್ ನಾರಾಯಣ್' ಮಹತ್ವದ ಸೂಚನೆ

Webdunia
ಶನಿವಾರ, 4 ಸೆಪ್ಟಂಬರ್ 2021 (13:52 IST)
ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ ಈ ಬಗ್ಗೆ ದೂರುಗಳು ಬಂದರೆ ಗಮನ ಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಎಚ್ಚರಿಕೆ ನೀಡಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು 'ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನ ಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳು ಸರಕಾರೀ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವರು, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲು ಆಗಬಹುದು. ಅದಕ್ಕೆ ಅವಕಾಶ ನೀಡಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

ಮುಂದಿನ ಸುದ್ದಿ
Show comments