ಯಾದಗಿರಿಯಲ್ಲಿ ಕುಡಿಯೋ ನೀರಿಗೂ ಹಾಹಾಕಾರ!

Webdunia
ಗುರುವಾರ, 17 ಆಗಸ್ಟ್ 2023 (07:40 IST)
ಯಾದಗಿರಿ: ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗಿದ್ರೂ ಬಿಸಿಲೂರು ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೀರಿನ ಹಾಹಾಕಾರ ಶುರುವಾಗಿರೋದ್ರ ನಡುವೆಯೇ ಜಿಲ್ಲೆಯ ತಾಲೂಕು ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ.
 
ತಾಲೂಕು ಕೇಂದ್ರದ ಜನ ಕಿಲೋಮೀಟರ್ ಗಟ್ಟಲೇ ನಡೆದು ನೀರು ತರಬೇಕಾದ ದುಸ್ಥಿತಿ ಎದುರಾಗಿದೆ.ಹೌದು. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ಕೇಂದ್ರವಾಗಿ 10 ವರ್ಷಗಳು ಕಳೆದಿದ್ರೂ ಇದುವರೆಗೂ ನೀರಿನ ಸಮಸ್ಯೆ ಮಾತ್ರ ಸರಿ ಹೋಗಿಲ್ಲ.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಜಲಜೀವನ್ ಮಿಷನ್ ಈಗಾಗಲೇ ಜಿಲ್ಲೆಯಲ್ಲಿ ಮುಕ್ತಾಯದ ಹಂತ ತಲುಪಿದ್ರೂ ವಡಗೇರಾ ಜನರಿಗೆ ಮಾತ್ರ ಒಂದು ಹನಿ ನೀರು ಸಿಕ್ಕಿಲ್ಲ. ಇನ್ನೂ ಇದೇ ವಡಗೇರಾ ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲೂ ನೀರು ಪೂರೈಕೆಗೆ ಯೋಜನೆ ಆರಂಭಗೊಂಡಿದ್ರೂ ಸಹ ಯಾವುದೇ ಪ್ರಯೋಜನವಾಗಿಲ್ಲ. 

ಶಾಲೆಗೆ ಹೋಗಬೇಕಾದ ಮಕ್ಕಳು ನಿತ್ಯವೂ, ಶಾಲೆ ಬಿಟ್ಟು ನೀರು ತರುವುದಕ್ಕೆ ಹೋಗುವಂತಾಗಿದೆ. ಗ್ರಾಮದಿಂದಾಚೆ ಎರಡು ಕಿಲೋ ಮೀಟರ್ ದೂರದಲ್ಲಿರುವ ಬೋರ್ ವೆಲ್ಗೆ ಪೋಷಕರೊಟ್ಟಿಗೆ ಹೋಗಿ ಬೈಕ್, ಸೈಕಲ್ ಹಾಗೂ ತಳ್ಳೋ ಬಂಡಿಯಲ್ಲಿ ನೀರು ತರಬೇಕು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಂಡರ್ಜಿ ಇಂಡಿಯಾ 2025 ಗೆ ಚಾಲನೆ ನೀಡಲಿರುವ ಸಚಿವ ಪ್ರಲ್ಹಾದ್ ಜೋಶಿ

ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

ಬಿಜೆಪಿಯವರ ಮಕ್ಕಳು ಸಾರ್ವಜನಿಕವಾಗಿ ಗೋಮೂತ್ರ ಕುಡಿಯಲಿ: ಪ್ರಿಯಾಂಕ್ ಖರ್ಗೆ ಸವಾಲು

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

ಪತ್ನಿ ಕೊಲೆಗೆ ಖತರ್ನಾಕ್ ಐಡಿಯಾ ಮಾಡಿದ್ದ ಡಾ ಮಹೇಂದ್ರ ರೆಡ್ಡಿ

ಮುಂದಿನ ಸುದ್ದಿ
Show comments