ಮಳೆಯಿಂದಾಗಿ ರಾಜ್ಯಾದ್ಯಂತ ಜನರು ತತ್ತರ!

Webdunia
ಮಂಗಳವಾರ, 12 ಜುಲೈ 2022 (07:01 IST)
ಬೆಂಗಳೂರು : ರಾಜ್ಯದ ಬಹುತೇಕ ಕಡೆ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕಳೆದ 10 ದಿನಗಳಿಂದ ಕರಾವಳಿ ಭಾಗದಲ್ಲಿ ವರುಣ ಆರ್ಭಟಿಸುತ್ತಿರುವ ಕಾರಣ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಉಡುಪಿಯಲ್ಲಿ ಪಾಪನಾಶಿನಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಠದ ಕುದ್ರು, ವಿಭುದೇಶ ತೀರ್ಥ ನಗರಕ್ಕೆ ನೀರುನುಗ್ಗಿದೆ. ಮಳೆ ನೀರಲ್ಲಿ ನಾಯಿಗಳು ಪರದಾಡಿವೆ. ಜನ ದೋಣಿ ಅವಲಂಬಿಸಿದ್ದಾರೆ. ಬೆಳ್ಳಾಲ, ನಂದ್ರೊಳ್ಳಿ ಕ್ಷೇತ್ರಪಾಲದಲ್ಲಿ ಮನೆ, ಉಪ್ಪುಂದದಲ್ಲಿ ಶಾಲಾ ಮೇಲ್ಛಾವಣಿ ಕುಸಿದಿವೆ.

ದಕ್ಷಿಣ ಕನ್ನಡದ ಮೊಗೆರ್ ಕುದ್ರುನಲ್ಲಿ ನೆರೆ ಇಳಿದಿಲ್ಲ. ಬಟ್ಟಪಾಡಿ ಕಡಲ ತೀರದಲ್ಲಿ ಭಾರೀ ಗಾತ್ರದ ಅಲೆಗಳ ಹೊಡೆತಕ್ಕೆ ರಸ್ತೆ ಕೊಚ್ಚಿಹೋಗಿದೆ. ರಸ್ತೆ ಸಂಪರ್ಕವಿಲ್ಲದೇ 30 ಮನೆಗಳ ಮಂದಿ ಪರದಾಡುವಂತಾಗಿದೆ.

ಕಡಲ್ಕೊರೆತದಿಂದ ತತ್ತರಿಸಿರುವ ಕಾಪು ತಾಲೂಕಿನ ಮುಳೂರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದರು. ಸಚಿವರು ಬಂದಿರುವ ವಿಚಾರ ತಿಳಿದ ಜನ, ಪ್ರವಾಹದ ನೀರಿನಲ್ಲಿ ನಡೆದು ಬಂದಿದ್ದರು. ಇದಕ್ಕೆ ಸಚಿವೆಯೂ ಸ್ಪಂದಿಸಿದ್ದರು. ಬೈತಡ್ಕದ ಹೊಳೆಯಲ್ಲಿ ಮುಳುಗಿದ್ದ ಕಾರಿನಲ್ಲಿದ್ದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. 

15 ಸೆಂ.ಮೀ ಮಳೆ ಸುರಿದಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಕಾರಣ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ 3 ದಿನ ಆರೆಂಜ್ ಅಲರ್ಟ್, ಉತ್ತರ ಒಳನಾಡಿನಲ್ಲಿ 4 ದಿನ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಕನ್ನಡದಲ್ಲಿ ನಾಳೆಯಿಂದ ಶಾಲೆಗಳು ತೆರೆಯಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments