Webdunia - Bharat's app for daily news and videos

Install App

ಸೋಂಕು ಏರಿಕೆಗೆ ಬಯಲಾಯ್ತು ಕಾರಣ!

Webdunia
ಶುಕ್ರವಾರ, 22 ಏಪ್ರಿಲ್ 2022 (10:17 IST)
ನವದೆಹಲಿ : ದೆಹಲಿ ಮತ್ತು ಸುತ್ತಮುತ್ತಲ ರಾಜ್ಯಗಳಲ್ಲಿ ದಿಢೀರನೆ ಕೋವಿಡ್ ಸೋಂಕು ಏರಿಕೆಗೆ ಒಮಿಕ್ರೋನ್ನ ಹೊಸ ಉಪತಳಿಗಳೇ ಕಾರಣವಿರಬಹುದು ಎಂದು ಮೂಲಗಳು ಹೇಳಿವೆ.

ಏಪ್ರಿಲ್ ತಿಂಗಳ ಮೊದಲ 15 ದಿನದ ಅವಧಿಯಲ್ಲಿ ದೆಹಲಿ, ಉತ್ತರಪ್ರದೇಶ, ಹಯಾರ್ಣದಲ್ಲಿ ದಿಢೀರಣೆ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿತ್ತು. ಹೀಗಾಗಿ ಇದು ವೈರಸ್ನ ಹೊಸ ತಳಿಯಾಗಿರಬಹುದು, ಇದು 4ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕಗಳು ಮೂಡಿದ್ದವು.

ಆದರೆ ಇದೀಗ ಏಪ್ರಿಲ್ ತಿಂಗಳ ಮೊದಲ 15 ದಿನಗಳ ಅವಧಿಯಲ್ಲಿ ಪತ್ತೆಯಾದ ಸೋಂಕಿನ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ಒಳಪಡಿಸಿದ ವೇಳೆ ಶೇ.52ರಷ್ಟುಪ್ರಕರಣಗಳಿಗೆ ಒಮಿಕ್ರೋನ್ನ ಉಪತಳಿ ಬಿಎ.2.12 ಮತ್ತು ಶೇ.11 ಪ್ರಕರಣಗಳಿಗೆ ಬಿಎ.2.10 ಕಾರಣ ಎಂದು ಕಂಡುಬಂದಿದೆ.

ಇದರ ಜೊತೆಗೆ ಬಿಎ.2.12.1 ಎಂಬ ಮತ್ತೊಂದು ಉಪತಳಿ ಕೂಡಾ ಕೆಲವೊಂದು ಮಾದರಿಗಳಲ್ಲಿ ಪತ್ತೆಯಾಗಿದೆ. ಬಿಎ.2 ಎಂದು ಗುರುತಿಸಲಾಗುವ ಒಮಿಕ್ರೋನ್ ತಳಿಗೆ ಹೋಲಿಸಿದರೆ ಬಿಎ.2.12 ಉಪತಳಿಯ ಹರಡುವಿಕೆ ಪ್ರಮಾಣ ಶೇ.30-90ರಷ್ಟುಹೆಚ್ಚಿದೆ ಎಂದು ಜಿನೋಮಿಕ್ ಸೀಕ್ವೆನ್ಸಿಂಗ್ ನಡೆಸುವ ಪ್ರಯೋಗಾಲಯಗಳ ಒಕ್ಕೂಟ ಸಂಸ್ಥೆಯ ಮೂಲಗಳು ತಿಳಿಸಿವೆ.

ಜೊತೆಗೆ ನೆರೆಯ ಉತ್ತರಪ್ರದೇಶ ಮತ್ತು ಹರ್ಯಾಣದಿಂದ ಈ ತಿಂಗಳ ಮೊದಲ 15 ದಿನಗಳಲ್ಲಿ ಸಂಗ್ರಹಿಸಿದ ಮಾದರಿಗಳಲ್ಲೂ ಬಹುತೇಕ ಇದೇ ಕೋವಿಡ್ ಉಪತಳಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments