Webdunia - Bharat's app for daily news and videos

Install App

ಕೊಡಗು ಸುತ್ತ ಮತ್ತೆ ಭೂಕಂಪನ!

Webdunia
ಭಾನುವಾರ, 26 ಜೂನ್ 2022 (13:35 IST)
ಮಡಿಕೇರಿ : ಪದೇ ಪದೇ ಭೂಕಂಪವಾಗುವ ವಿಜಯಪುರ ಮತ್ತು ಕಳೆದ ಕೆಲ ವರ್ಷಗಳಿಂದ ನಿರಂತರ ಪ್ರಕೃತಿ ವಿಕೋಪಕ್ಕೀಡಾಗುತ್ತಿರುವ ಕೊಡಗು ಜಿಲ್ಲೆಯ ವಿವಿಧೆಡೆಗಳಲ್ಲಿ ಶುಕ್ರವಾರ ರಾತ್ರಿ ಮತ್ತು ಶನಿವಾರ ಬೆಳಿಗ್ಗೆ ಮತ್ತೆ ಭೂಕಂಪನವಾಗಿದ್ದು,
 
ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ವಿಜಯಪುರ ನಗರದ ಹಲವೆಡೆ ಶುಕ್ರವಾರ ರಾತ್ರಿ ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ 2.4 ತೀವ್ರತೆ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕೆಲವೆಡೆ ಬೆಳಗ್ಗೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 2.3 ದಾಖಲಾಗಿದೆ.

ವಿಜಯಪುರ ನಗರದ ರೈಲ್ವೆ ಸ್ಟೇಶನ್ ಪ್ರದೇಶ, ಕೀರ್ತಿನಗರ, ಅಲ್-ಅಮಿನ್ ಪ್ರದೇಶ ಸೇರಿದಂತೆ ಸುಮಾರು 4 ಕಿ.ಮೀ. ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 10.38ಕ್ಕೆ ಭೂಕಂಪನವಾಗಿದೆ. ಭೂಮಿ ನಡಗುತ್ತಿದ್ದಂತೆಯೇ ಭಯಂಕರ ಸದ್ದು ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.

ಬಸವನ ಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ರಾತ್ರಿ 10.46ಕ್ಕೆ ಭೂಮಿ ಕಂಪನವಾಗಿದ್ದು ಜನರು ಗಾಬರಿಯಿಂದ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಮನಗೂಳಿ ಹಾಗೂ ವಿಜಯಪುರದಲ್ಲಿ ಮೂರು ತಿಂಗಳ ಹಿಂದೆಯೂ ಭೂಕಂಪನವಾಗಿತ್ತು. ಈಗ ಮತ್ತೆ ಭೂಕಂಪನವಾಗಿದ್ದು ಜನರು ಆತಂಕ ಪಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments